ಕನ್ನಡಪ್ರಭ ವಾರ್ತೆ ಬಳ್ಳಾರಿ
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದು ಖಚಿತ. ಆದರೆ, ಬಿಜೆಪಿಯವರು ದೇಶದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಆರ್ ಎಸ್ ಹಾಗೂ ಬಿಜೆಪಿಯವರು ಸೇರಿ ಏನಾದರೂ ಮಾಡುತ್ತಾರೆ (ಆಪರೇಷನ್ ಕಮಲ) ಎಂಬ ಭಯವಿದೆ. ನಮ್ಮ ಶಾಸಕರಿಗೆ ಬೆದರಿಕೆ ಹಾಕುವ ಸಾಧ್ಯತೆಯೂ ಇದೆ. ಹೀಗಾಗಿ ನಮ್ಮ ಶಾಸಕರ ರಕ್ಷಣೆಗಾಗಿ ತೆಲಂಗಾಣಕ್ಕೆ ತೆರಳುತ್ತಿದ್ದೇವೆ ಎಂದರು.
ಚುನಾವಣೆ ಫಲಿತಾಂಶ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಪರ ಬಂದಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯವರು ಏನಾದರೂ ಮಾಡುತ್ತಾರೆ ಎಂಬ ಸಂಶಯ ನಮ್ಮದು. ಈಗಾಗಲೇ ಅವರು ಕರ್ನಾಟಕ ಸೇರಿದಂತೆ ಕೆಲವು ಕಡೆ ತಂತ್ರಗಾರಿಕೆ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಇದಕ್ಕೆ ನಮ್ಮ ರಾಜ್ಯವೇ ಉದಾಹರಣೆ. ನಮ್ಮ ಶಾಸಕರನ್ನು ಕರೆದುಕೊಂಡು ಅಧಿಕಾರ ಮಾಡಿದರು. ತೆಲಂಗಾಣದಲ್ಲೂ ಈ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಹೀಗಾಗಿಯೇ ಎಐಸಿಸಿ ತೆಲಂಗಾಣಕ್ಕೆ ತೆರಳುವಂತೆ ಸೂಚನೆ ನೀಡಿದೆ ಎಂದು ತಿಳಿಸಿದ ಸಚಿವ ನಾಗೇಂದ್ರ, ತೆಲಂಗಾಣದಲ್ಲಿ ನಾವು ಆಪರೇಷನ್ ಮಾಡಲ್ಲ. ನಮ್ಮ ತತ್ವ ಸಿದ್ಧಾಂತ ನಂಬಿ ಬಂದವರನ್ನು ಸ್ವಾಗತಿಸುತ್ತೇವೆ ಹೊರತು, ಬಿಜೆಪಿಯವರಂತೆ ಆಪರೇಷನ್ ಗೆ ಕೈ ಹಾಕಲ್ಲ ಎಂದು ತಿಳಿಸಿದರು.