ಚನ್ನಪಟ್ಟಣ: ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸಬೇಕು. ಇಲ್ಲದಿದ್ದಲ್ಲಿ ಜೆಡಿಎಸ್ನಿಂದ ನೀವು ಅಭ್ಯರ್ಥಿ ನಿಲ್ಲಿಸಿ, ಬಿಜೆಪಿಯಿಂದ ನಾವು ಅಭ್ಯರ್ಥಿ ಹಾಕುತ್ತೇವೆ. ಇಬ್ಬರು ಫ್ರೆಂಡ್ಲಿ ಫೈಟ್ ಆಡೋಣ ಎಂದು ಬಿಜೆಪಿ ಮುಖಂಡರು ಜೆಡಿಎಸ್ಗೆ ಪಂಥಾಹ್ವಾನ ನೀಡಿದ್ದಾರೆ.
ಸಿಪಿವೈಗೆ ಟಿಕೆಟ್ ನೀಡಿ:
ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಮಾತನಾಡಿ, ನೀರಾವರಿ ಯೋಜನೆಗಳ ಅನುಷ್ಠಾನ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಯೋಗೇಶ್ವರ್ ಸಾಕಷ್ಟು ಶ್ರಮಿಸಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆ ಸೇರಿದಂತೆ ೫ ಬಾರಿ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದು, ಇದರಿಂದ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಸದೃಢ ಅಡಿಪಾಯ ದೊರೆತಿದೆ. ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸಬೇಕು ಎಂದು ಮನವಿ ಮಾಡಿದರು.ಎನ್ಡಿಎ ಅಭ್ಯರ್ಥಿ ಯಾರಾಗಬೇಕು ಎಂದು ಜೆಡಿಎಸ್ ಹಾಗೂ ಬಿಜೆಪಿ ವರಿಷ್ಠರು ಕುಳಿತು ನಿರ್ಧರಿಸಲಿದ್ದಾರೆ. ಪಕ್ಷ ಸೂಚಿಸಿದ ಅಭ್ಯರ್ಥಿ ಪರ ಎಲ್ಲರೂ ಕೆಲಸ ಮಾಡಬೇಕಾಗುತ್ತದೆ. ಅಭ್ಯರ್ಥಿ ಕುರಿತು ಯಾರು ಹೇಳಿಕೆಗಳನ್ನು ನೀಡಿ ಗೊಂದಲ ಮೂಡಿಸಬಾರದು ಎಂದು ಮನವಿ ಮಾಡಿದರು.
ಬಿಜೆಪಿ ತಾಲೂಕು ಅಧ್ಯಕ್ಷ ತೂಬಿನಕೆರೆ ರಾಜು ಮಾತನಾಡಿ, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಉಪಚುನಾವಣೆಯಲ್ಲಿ ನಿಖಿಲ್ ಅವರೇ ಅಭ್ಯರ್ಥಿ, ಯೋಗೇಶ್ವರ್ ಅವರು ನಿಖಿಲ್ ಪರ ದುಡಿಯಲಿ ಎಂದು ಹೇಳಿದ್ದಾರೆ. ಇದನ್ನು ಹೇಳಲು ಇವರೇನು ಜೆಡಿಎಸ್ ವರಿಷ್ಠರಾ? ಬಿಜೆಪಿ ಅಥವಾ ಎನ್ಡಿಎ ವರಿಷ್ಠರು ಈ ರೀತಿ ಹೇಳಲು ಇವರಿಗೆ ಸೂಚಿಸಿದ್ದಾರೆಯೇ ಎಂದು ಪ್ರಶ್ನಿಸಿದರು.
ಫ್ರೆಂಡ್ಲಿ ಫೈಟ್ಗೂ ಸಿದ್ಧ:
ಸಿಪಿವೈ ಶಕ್ತಿ ಎಲ್ಲರಿಗೂ ಗೊತ್ತಿದೆ:
ಕಳೆದ ೨೫ ವರ್ಷಗಳಿಂದ ಜೆಡಿಎಸ್ನಲ್ಲಿ ದುಡಿದಿದ್ದಂತ ಹಲ ಮುಖಂಡರು ನಿಮ್ಮ ಧೋರಣೆಯಿಂದ ಬೇಸತ್ತು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮೊದಲು ನಿಮ್ಮ ಪಕ್ಷದಲ್ಲಿನ ಗೊಂದಲ ಪರಿಹರಿಸಿಕೊಳ್ಳಿ. ಸಿಪಿವೈ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇರುವುದು ಇನ್ನು ಒಂದುವರೆ ವರ್ಷ ಮಾತ್ರ, ಆದರೆ, ಇನ್ನು ನಾಲ್ಕು ವರ್ಷ ಶಾಸಕತ್ವವಿದ್ದರೂ ಕುಮಾರಸ್ವಾಮಿ ದೇಶ ಸೇವೆ ಮಾಡಲು ಹೋಗಿದ್ದಾರೆ. ನಿಖಿಲ್ ಸ್ವತಃ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದರೂ ನೀವು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿದ್ದು, ಮೈತ್ರಿ ಧರ್ಮ ಪಾಲಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ನಗರಾಧ್ಯಕ್ಷ ಶಿವು, ಬಮೂಲ್ ಮಾಜಿ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಕುಳ್ಳಪ್ಪ ಇತರರಿದ್ದರು.
ಚನ್ನಪಟ್ಟಣದಲ್ಲಿ ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.