ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ದಿನಪೂರ್ತಿ ಕಾರ್ಯಕ್ರಮಗಳಲ್ಲಿ ಭಾಗಿ

KannadaprabhaNewsNetwork |  
Published : Apr 28, 2024, 01:18 AM IST
ಮಂಗಳೂರಲ್ಲಿ ರಾಘವೇಶ್ವರಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ | Kannada Prabha

ಸಾರಾಂಶ

ನಾನು ಸೈನಿಕನಾಗಿದ್ದೆ, ಒಬ್ಬ ಸೈನಿಕನಿಗೆ ರಿಲ್ಯಾಕ್ಸ್ ಮೂಡ್ ಅನ್ನೋದು ಇಲ್ಲ. ನಮ್ಮ ಕೆಲಸವೇ ನಮಗೆ ದೊಡ್ಡ ರಿಲ್ಯಾಕ್ಸ್ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಮತದಾನದ ಮರುದಿನ ಶನಿವಾರ ದಿನಪೂರ್ತಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಬೆಳಗ್ಗೆ ಮನೆಯಲ್ಲಿ ಪೂಜೆ ನೆರವೇರಿಸಿದ ಬಳಿಕ ಶರವು ಶ್ರೀಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ಪಕ್ಷದ ಮುಖಂಡರನ್ನು ಭೇಟಿ ಮಾಡಿದರು. ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಜತೆ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆಸಿದರು. ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು.

ಕೊಂಚಾಡಿಯಲ್ಲಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇತ್ತೀಚೆಗೆ ನಿಧನರಾದ ಟ್ರಾವೆಲ್‌ ಉದ್ಯಮಿ ನಿರ್ಮಲಾ ಕಾಮತ್‌ ಮನೆಗೆ ಭೇಟಿ ನೀಡಿದರು. ಮರಕಡದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಮನೆಗೆ ಭೇಟಿ ನೀಡಿದರು. ನಂತರ ಸ್ಥಳೀಯ ಶಾಸಕರು, ಪಕ್ಷದ ಮುಖಂಡರ ಭೇಟಿ ಮಾಡಿದರು.

ಕೆಲಸವೇ ದೊಡ್ಡ ರಿಲ್ಯಾಕ್ಸ್‌: ಕ್ಯಾ.ಬ್ರಿಜೇಶ್‌ ಚೌಟ

ನಾನು ಸೈನಿಕನಾಗಿದ್ದೆ, ಒಬ್ಬ ಸೈನಿಕನಿಗೆ ರಿಲ್ಯಾಕ್ಸ್ ಮೂಡ್ ಅನ್ನೋದು ಇಲ್ಲ. ನಮ್ಮ ಕೆಲಸವೇ ನಮಗೆ ದೊಡ್ಡ ರಿಲ್ಯಾಕ್ಸ್ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಯ ಪ್ರಚಾರ ಕಾರ್ಯದಲ್ಲೂ ಭಾಗಿಯಾಗುತ್ತೇನೆ. ನಮಗೆ ರಾಷ್ಟ್ರೀಯ ಕೆಲಸ ಮಾಡುವುದೇ ಸಂತೃಪ್ತಿ ಕೊಡುವ ಭಾವನೆ. ಗೆದ್ದು ಬಂದಲ್ಲಿ ನವಯುಗ, ನವ ಪಥ ಅನ್ನೋ ಯೋಜನೆಯನ್ನು ಸಾಕಾರಗೊಳಿಸುತ್ತೇನೆ. ಉದ್ಯಮ, ಪ್ರವಾಸೋದ್ಯಮ, ಉದ್ಯೋಗ, ಅಭಿವೃದ್ಧಿ, ಶಿಕ್ಷಣ ಸೇರಿದಂತೆ ವಿವಿಧ ವಿಚಾರಗಳಿಗೆ ಆದ್ಯತೆ ನೀಡಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಯು - 2 ಪರೀಕ್ಷೆ : ಕೆಎಸ್ಸಾರ್ಟಿಸಿ ಬಸ್ಸಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ-ಕೋರಿಕೆಯ ನಿಲುಗಡೆ ನೀಡಬೇಕು
ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದ ಸಿಹಿ ಸುದ್ದಿ : ಏನೆಲ್ಲಾ ಸಿಗುತ್ತೆ ?