ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಕುಟುಂಬಸ್ಥರೊಂದಿಗೆ ಮಾತನಾಡಿ ಘಟನೆ ಕುರಿತು ಮಾಹಿತಿ ಪಡೆದ ನಡ್ಡಾ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನೇಹಾ ಕೊಲೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಪೊಲೀಸ್ ಇಲಾಖೆ ಅಸಮರ್ಥವಾಗಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದರು.
ಇದು ಅತ್ಯಂತ ಭೀಕರ ಘಟನೆಯಾಗಿದ್ದು, ಇಡೀ ದೇಶವೇ ಬೆಚ್ಚಿಬಿದ್ದಿದೆ. ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿ, ಅವರೊಂದಿಗೆ ನಾವಿದ್ದೇವೆ ಎಂದು ಹೇಳಲು ನಾನು ಆಗಮಿಸಿದ್ದೇನೆ. ಘಟನೆ ಕುರಿತು ಮೃತಳ ತಾಯಿ ಹೇಳಿರುವುದನ್ನು ಕೇಳಿ ನನಗೆ ತೀವ್ರ ನೋವು ಆಗಿದೆ. ಈ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ನಾವೆಲ್ಲ ಬದ್ಧರಾಗಿದ್ದೇವೆ ಎಂದರು.ಜನತೆ ಕ್ಷಮಿಸುವುದಿಲ್ಲ:
ನೀವೇ ನ್ಯಾಯ ಕೊಡಿಸಿ-ನಿರಂಜನ್:
ನಡ್ಡಾ ಭೇಟಿ ವೇಳೆ ನೇಹಾಳ ತಂದೆ ನಿರಂಜನ್, ನನ್ನ ಮಗಳ ಸಾವಿಗೆ ನ್ಯಾಯ ಬೇಕು. ಈಗಾಗಲೇ ಸರ್ಕಾರ ಹಾಗೂ ಸ್ಥಳೀಯ ಪೊಲೀಸರು ಈ ಪ್ರಕರಣದ ಹಾದಿ ತಪ್ಪಿಸುತ್ತಿದ್ದಾರೆ. ಹೇಗಾದರೂ ಮಾಡಿ ನಮಗೆ ನ್ಯಾಯ ಕೊಡಿಸಿ, ಇದು ನಿಮ್ಮಿಂದ ಮಾತ್ರ ಸಾಧ್ಯ ಎಂದು ಮನವಿ ಮಾಡಿದರು.ಇದಕ್ಕೆ ಉತ್ತರಿಸಿದ ನಡ್ಡಾ, ನಿಮ್ಮ ನೋವು ನನಗೆ ಅರ್ಥವಾಗಿದೆ. ಸರ್ಕಾರ ನೇಹಾಳ ಹೆಸರಿನಲ್ಲಿ ವಿಶೇಷ ಕಾನೂನು ರಚಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯವೆಸಗುವವರನ್ನು ಶೂಟೌಟ್ ಮಾಡುವ ಕಾನೂನು ಜಾರಿಗೆ ತರಲು ಒತ್ತಾಯಿಸುವುದಾಗಿ ಭರವಸೆ ನೀಡಿದರು. ನಂತರ ನೇಹಾಳ ತಾಯಿ ಗೀತಾ ಅವರೊಂದಿಗೆ ಚರ್ಚೆ ನಡೆಸಿ ಪುತ್ರಿಯ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನಡ್ಡಾ ನೀಡಿದರು.