ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್ ಸಂಗ್ರಹ ಬಿಜೆಪಿ ಖಂಡನೆ

KannadaprabhaNewsNetwork |  
Published : Jul 19, 2024, 12:53 AM IST
ಬಿಜೆಪಿ | Kannada Prabha

ಸಾರಾಂಶ

ರಾಜ್ಯ ಸರ್ಕಾರ ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಸ್ಥಳೀಯ ಟೋಲ್ ವಿರೋಧಿ ಹೋರಾಟ ಸಮಿತಿಯ ಸಹಕಾರದೊಂದಿಗೆ ಉಗ್ರ ಹೋರಾಟ ಮಾಡಲಿದೆ ಎಂದು ಬಿಜೆಪಿ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಪಡುಬಿದ್ರಿ-ಬೆಳ್ಮಣ್‌-ಕಾರ್ಕಳ ರಸ್ತೆಯಲ್ಲಿ ಆ.16ರಿಂದ ಟೋಲ್ ಸಂಗ್ರಹ ಮಾಡುವಂತೆ ಸರ್ಕಾರವು ಹಾಸನ ಮೂಲದ ಭಾರತಿ ಕನ್‌ಸ್ಟ್ರಕ್ಷನ್‌ ಸಂಸ್ಥೆಗೆ ಆದೇಶ ಮಾಡಿರುವುದು ಕಾರ್ಕಳ ಮತ್ತು ಬೆಳ್ಮಣ್‌ ಆಸುಪಾಸಿನ ಜನರಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ದೊಡ್ಡ ದ್ರೋಹ. ಇದನ್ನು ಕಾರ್ಕಳ ಬಿಜೆಪಿ ಸಹಿಸುವುದಿಲ್ಲ. ರಾಜ್ಯ ಸರ್ಕಾರ ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಸ್ಥಳೀಯ ಟೋಲ್ ವಿರೋಧಿ ಹೋರಾಟ ಸಮಿತಿಯ ಸಹಕಾರದೊಂದಿಗೆ ಉಗ್ರ ಹೋರಾಟ ಮಾಡಲಿದೆ ಎಂದು ಬಿಜೆಪಿ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಸರ್ಕಾರ ಬೆಳ್ಮಣ್‌ ಸಮೀಪ ಟೋಲ್‌ ನಿರ್ಮಾಣಕ್ಕೆ ಚಾಲನೆ ನೀಡಿತ್ತು. ಆ ಸಂದರ್ಭ ಶಾಸಕ ವಿ.ಸುನಿಲ್ ಕುಮಾರ್, ಸ್ಥಳೀಯರ ತೀವ್ರ ಹೋರಾಟದ ಫಲವಾಗಿ ಈ ಆದೇಶವನ್ನು ಹಿಂಪಡೆದಿತ್ತು. ಪ್ರಸ್ತುತ ಈ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನಿಲುವಿನಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದ್ದು, ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೆ ಈ ಭಾಗದಲ್ಲಿ ಟೋಲ್ ಸಂಗ್ರಹ ಮಾಡುವುದರ ಮುಖಾಂತರ ಜನರ ರಕ್ತ ಹೀರಲು ಹೊರಟಿದೆ.

ಪ್ರಸ್ತಾಪಿತ ಟೋಲ್ ಪ್ಲಾಜಾ ನಿರ್ಮಾಣಗೊಂಡಲ್ಲಿ ಕಾರ್ಕಳ-ಬೆಳ್ಮಣ್‌ ಮೂಲಕ ಮೂಲ್ಕಿ, ಮಂಗಳೂರಿಗೆ ಸಂಚರಿಸುವವರಿಗೆ ಕೇವಲ 6 ಕಿ.ಮೀ. ಅಂತರದಲ್ಲಿ ಎರಡು ಬಾರಿ ಟೋಲ್ ಪಾವತಿಸಬೇಕಾಗುತ್ತದೆ. ಈಗಾಗಲೇ ಜನರು ರಾಜ್ಯ ಸರ್ಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದಲೇ ನಷ್ಟ ಅನುಭವಿಸುತ್ತಿದ್ದಾರೆ. ಇದೀಗ ಮತ್ತೆ ಟೋಲ್ ಸಂಗ್ರಹ ಮಾಡಿದ್ದಲ್ಲಿ ರಾಜ್ಯ ಸರ್ಕಾರ ಮಾಡುವ ಈ ಭಾಗದ ಜನರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ