ಕನ್ನಡಪ್ರಭ ವಾರ್ತೆ ಬೆಂಗಳೂರು
ಉಭಯ ಸದನದಲ್ಲಿ ಬಿಡದಿ ಟೌನ್ ಶಿಪ್ ಯೋಜನೆ, ನೈಸ್ ಯೋಜನೆ ಅಕ್ರಮಗಳು, ಬರಗಾಲ, ಕೆಪಿಎಸ್ಸಿ ಹಗರಣ, ಭ್ರಷ್ಟಾಚಾರ, ಬರಗಾಲ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಉಭಯ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.
ಶನಿವಾರ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ನಾಯಕರ ಸಭೆಯಲ್ಲಿ ಈ ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು? ಸರ್ಕಾರವನ್ನು ಹೇಗೆ ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬುದರ ಬಗ್ಗೆ ಉಭಯ ಪಕ್ಷಗಳ ನಾಯಕರು ಚರ್ಚಿಸಿದ್ದಾರೆ.ಈ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೂ ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳಿವೆ. ಸಂಪುಟ ವಿಸ್ತರಣೆಗೆ ತಿಂಗಳುಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಅಂತೆಯೇ ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿ ಎತ್ತಲಿವೆ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಅಧಿವೇಶನದಲ್ಲಿ ಬರಗಾಲ, ನೈಸ್, ಬಿಡದಿ ಟೌನ್ಶಿಪ್, ಕೆಪಿಎಸ್ಸಿ ಭ್ರಷ್ಟಾಚಾರ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಇದಕ್ಕೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ. ಮುಂದೆಯೂ ಪ್ರಮುಖವಾದ ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಲಿದ್ದೇವೆ. ಚುನಾವಣೆಯೂ ಸಮೀಪ ಇರುವುದರಿಂದ ಎಲ್ಲ ಸಂದರ್ಭದಲ್ಲಿ ಒಂದಾಗಿ ಹೋಗಲು ನಿರ್ಧರಿಸಲಾಗಿದೆ ಎಂದರು.
ಕೇಂದ್ರದ ಬಿಜೆಪಿ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಎರಡೂ ಪಕ್ಷಗಳ ಸಮನ್ವಯಕ್ಕಾಗಿ ಸಮಿತಿ ರಚನೆಯಾಗಲಿದೆ. ಇದರಲ್ಲಿ ಎರಡೂ ಕಡೆಯಿಂದ ಐದು ಸದಸ್ಯರು ಇರಲಿದ್ದಾರೆ,