ಕನ್ನಡಪ್ರಭ ವಾರ್ತೆ ಮಂಗಳೂರು
ಬಳಿಕ ಸುದ್ದಿಗಾರರಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಹರೀಶ್ ಪೂಂಜಾ, ಡಾ.ಭರತ್ ಶೆಟ್ಟಿ, ಒಂದು ಸಮುದಾಯವನ್ನು ಕೇಂದ್ರೀಕರಿಸಿ ರಾತ್ರಿ ಮನೆಗಳಿಗೆ ಪೊಲೀಸರು ತೆರಳಿ ತನಿಖೆ ನಡೆಸುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಪೊಲೀಸರ ಅತಿರೇಕದ ಕ್ರಮ ಮುಂದುವರಿದರೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸಭೆ ನಡೆಸಿ ಶಾಸಕರ ನಿಯೋಗ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುವುದು ಎಂದು ತೀರ್ಮಾನಿಸಲಾಯಿತು. ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಪುತ್ತೂರು ಭಾಗಿಯಾಗಿದ್ದರು.ಹಸ್ತಕ್ಷೇಪ ರಹಿತ ತನಿಖೆ ನಡೆಯಲಿ:
ಒನ್ಸೈಡ್ ಕೇಸ್:
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ಕಳೆದೊಂದು ತಿಂಗಳ ವಿದ್ಯಮಾನಗಳ ಬಗ್ಗೆ ಅವರ ಜೊತೆ ಚರ್ಚೆ ಮಾಡಿದ್ದೇವೆ. ಹಿಂದೂ ಸಮಾಜದ ಮೇಲೆ ಕಾಂಗ್ರೆಸ್ ಸರ್ಕಾರದ ಜೊತೆ ಸೇರಿ ಮಾಡುವ ದೌರ್ಜನ್ಯ ನಿಲ್ಲಿಸಲು ಆಗ್ರಹಿಸಿದ್ದೇವೆ. ಸದ್ಯ ಇಬ್ಬರು ಅಧಿಕಾರಿಗಳು ಶಾಂತಿ ಕಾಪಾಡಲು ಒಳ್ಳೆಯ ಚಿಂತನೆ ಇಟ್ಟಿದ್ದಾರೆ. ಸರ್ಕಾರದ ಮಾತು ಕೇಳಿ ಕೆಲಸ ಮಾಡುವುದಿಲ್ಲ ಎನ್ನುವ ಭಾವನೆ ನಮಗೆ ಬಂದಿದೆ. ಶಾಂತಿ ಕಾಪಾಡಲು ಜಿಲ್ಲೆಯಲ್ಲಿ ಕೆಲಸ ಮಾಡುತ್ತಾರೆ. ಪ್ರಚೋದನಕಾರಿ ಭಾಷಣಗಳಿಗೆ ಈಗಾಗಲೇ ಎಫ್ಐಆರ್ ಆಗಿದೆ. ಆದರೆ ಅದೆಲ್ಲವೂ ಒನ್ ಸೈಡ್ ಆಗಿದೆ, ಹಿಂದೂ ಸಮಾಜದ ಮೇಲೆ ಮಾತ್ರ ಆಗಿದೆ. ಮುಸಲ್ಮಾನರ ಪ್ರಚೋದನೆಗಳಿಗೆ ಯಾವುದೇ ರೀತಿಯ ಎಫ್ಐಆರ್ ಆಗಿಲ್ಲ. ಕಾರ್ಯಕರ್ತರು ಮತ್ತು ಹಿರಿಯರ ಮನೆಗೆ ಭೇಟಿ ಕೊಡುವುದನ್ನು ತಕ್ಷಣಕ್ಕೆ ನಿಲ್ಲಿಸಬೇಕು ಎಂದು ಹೇಳಿದ್ದೇವೆ. ಅಪರಾಧ ಹಿನ್ನೆಲೆ ಇಲ್ಲದವರ ಮನೆಗಳಿಗೆ ಹೋಗೋದನ್ನು ಸರಿಯಲ್ಲ ಎಂದಿದ್ದೇವೆ. ನಾವು ಆಗ್ರಹ ಮಾಡಿದ್ದೇವೆ, ಹಾಗಾಗಿ ಅವರ ಗಮನಕ್ಕೆ ತಂದಿದ್ದೇವೆ ಎಂದರು. ಅಶಾಂತಿ ಸೃಷ್ಟಿಸುವವರ ಹೆಸರೇ ಇಲ್ಲ:ಗಡೀಪಾರು ಪಟ್ಟಿಯಲ್ಲಿ ಇರುವ ವ್ಯಕ್ತಿಗಳಲ್ಲಿ ಮುಸಲ್ಮಾನರ ಹೆಸರುಗಳು ಇವೆ ಎನ್ನುತ್ತಾರೆ. ಆದರೆ ಈ ಪಟ್ಟಿ ಮಾಡಿದ್ದು ಯಾರು? ಯಾವಾಗ ತಯಾರಾಯ್ತು? ಈ ಪಟ್ಟಿಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮುಸಲ್ಮಾನರ ಹೆಸರುಗಳಿಲ್ಲ. ಆದರೆ ಸಮಾಜ ಕಾರ್ಯ ಮಾಡುವ ಹಿಂದೂ ಮುಖಂಡರ ಹೆಸರುಗಳು ಇದೆ. ಮುಸಲ್ಮಾನ ಸಂಘಟನೆ ಪ್ರಮುಖರ ಯಾವುದೇ ಹೆಸರುಗಳು ಇಲ್ಲಿಲ್ಲ. ಕೆಪಿಸಿಸಿ ನಿಯೋಗ ಇಲ್ಲಿಗೆ ಯಾಕೆ ಬರಬೇಕು? ಅವರದ್ದೇ ಸರ್ಕಾರ ಇದೆ. ಜಿಲ್ಲೆಯಲ್ಲಿ ರಾಜಕೀಯ ಮಾಡಲು ಅವರು ಇಲ್ಲಿಗೆ ಬರುತ್ತಿದ್ದಾರೆ ಎಂದು ಅವರು ಹೇಳಿದರು.