ಹುಬ್ಬಳ್ಳಿ:
ಇಲ್ಲಿನ ಅರವಿಂದ ನಗರದ ಬಿಜೆಪಿ ಕಾರ್ಯಾಲಯದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಕಾರವಾರ ರಸ್ತೆಯ ಇಎಸ್ಐ ಆಸ್ಪತ್ರೆಯ ವರೆಗೆ ನಡೆಯಿತು. ನಂತರ ಅಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ನಾನು ನಾನು ಕಳ್ಳ 14 ಪ್ಲಾಟ್ ಗುಳುಂ ಎಂಬ ಪೋಸ್ಟರ್ ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ರಾಜ್ಯಪಾಲರು ಮುಖ್ಯಮಂತ್ರಿ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದಾಗ ದಲಿತ ಸಮುದಾಯದವರಾದ ಅವರ ಮೇಲೆ ಇಡೀ ಕಾಂಗ್ರೆಸ್ ಸರ್ಕಾರ ಮುಗಿ ಬಿದ್ದಿತ್ತು. ಅದನ್ನು ವಿರೋಧಿಸಿ ನ್ಯಾಯಾಲಯದ ಮೊರೆ ಹೋದರು. ಈಗ ನ್ಯಾಯಾಲಯದಲ್ಲಿ ರಾಜ್ಯಪಾಲರ ನಡೆ ಎತ್ತಿ ಹಿಡಿಯುವ ಮೂಲಕ ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂದು ಸಾಬೀತಾಗಿದೆ ಎಂದರು.ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆ ಮೊಳೆಯಾಗಲಿದೆ ಎಂದು ಹೇಳಿದ್ದೆ. ಅದು ನಿಜವಾಗುವ ಸಮಯ ಬರುತ್ತಿದೆ. ಸಿದ್ದರಾಮಯ್ಯ ಈಗಲಾದರೂ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಒಳಪಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ರಾಧಾ ಬಾಯಿ ಸಫಾರೆ, ಮಹೇಂದ್ರ ಕೌತಾಳ, ಸುನೀತಾ ಚವ್ಹಾಣ, ಶಿವು ಮೆಣಸಿನಕಾಯಿ ಸೇರಿದಂತೆ ಹಲವರಿದ್ದರು.