ಅಕ್ರಮ ಪಾಕ್‌ ಪ್ರಜೆಗಳ ಗಡಿಪಾರಿಗೆ ಬಿಜೆಪಿ ಒತ್ತಾಯ

KannadaprabhaNewsNetwork |  
Published : May 07, 2025, 12:49 AM IST
6ಎಚ್‌ಪಿಟಿ1- ಹೊಸಪೇಟೆಯಲ್ಲಿ ಮಂಗಳವಾರ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್‌ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್‌ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಕಾಶ್ಮೀರದಲ್ಲಿ ಪಾಕಿಸ್ತಾನದ ನೆರವಿನಿಂದ ಅಮಾಯಕ 26 ಜನ ಭಾರತೀಯ ಪ್ರಜೆಗಳನ್ನು ಕೊಲ್ಲಲಾಗಿದೆ. ಈ ಕುಕೃತ್ಯಕ್ಕೆ ಕಾರಣರಾದವರು ಯಾರೇ ಆಗಿರಲಿ ಪ್ರಧಾನಿ ಮೋದಿ ಅವರು ಮಟ್ಟ ಹಾಕುತ್ತಾರೆ. ದೇಶದ 145 ಕೋಟಿ ಜನರು, ಭಾರತದ ಪ್ರಧಾನಿ ಮೋದಿ ಹಾಗೂ ಸೇನಾ ಪಡೆ ಜೊತೆಗಿದ್ದಾರೆ. ಈಗಾಗಲೇ ಅಕ್ರಮ ಪಾಕಿಸ್ತಾನಿ ವಲಸಿಗರನ್ನು ದೇಶದಿಂದ ಹೋರ ಹಾಕಲಾಗುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್‌ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು. ದೇಶದ ಭದ್ರತಾ ದೃಷ್ಟಿಕೋನದಿಂದ ಈ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಉಪಾಧ್ಯಕ್ಷ ಕೃಷ್ಣ ನಾಯಕ, ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ, ಮುಖಂಡರಾದ ರಾಘವೇಂದ್ರ, ಕಿಚಡಿ ಕೊಟ್ರೇಶ್, ವೀರೇಶ್ವರ ಸ್ವಾಮಿ, ಮಧುಸೂದನ್, ಬಸವರಾಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು