ಕಡೂರು ಎಪಿಎಂಸಿ ಮೈದಾನದಲ್ಲಿ ಹಾಸನ ಲೋಕಸಭಾ ಕಾಂಗ್ರೆಸ್ ಶ್ರೇಯಸ್ ಪಟೇಲ್ ಪರ ಮತ ಯಾಚನೆ
ಜನರ ಖಾತೆಗೆ ಹಣವೂ ಹಾಕದೆ ಉದ್ಯೋಗವೂ ನೀಡದ ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕಡೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಶ್ರೇಯಸ್ ಪಟೇಲ್ ಪರ ಮತ ಯಾಚನೆ ಸಭೆಯಲ್ಲಿ ಮಾತನಾಡಿದರು. ಕಳೆದ 2023- 24 ರಲ್ಲಿ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ 123 ತಾಲೂಕು ಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಲಾಗಿತ್ತು. 2023 ಸೆಪ್ಟೆಂಬರ್ ನಲ್ಲಿ ರಾಜ್ಯದ ಬರದ ಸ್ಥಿತಿ ಕುರಿತು ಕೇಂದ್ರಕ್ಕೆ ಮನವಿ ನೀಡಿದರೂ ಕೇಂದ್ರದ ಬಿಜೆಪಿ ಸರ್ಕಾರ 2 ರು. ಕೂಡ ಬಿಡುಗಡೆ ಮಾಡಲಿಲ್ಲ. ಈ ಕುರಿತು ನಾವು ಸುಪ್ರೀಂ ಕೋರ್ಟಿಗೆ ಹೋಗಿದ್ದು ನ್ಯಾಯಾಲಯ ಶೀಘ್ರವೇ ಈ ಸಮಸ್ಯೆ ಬಗೆಹರಿಸುವಂತೆ ಆದೇಶ ನೀಡಿದೆ ಎಂದರು.ಕಳೆದ ಡಿಸೆಂಬರ್ 19 ರಂದು ಪ್ರಧಾನಿ ಮೋದಿ ಅವರನ್ನು ಶಾಸಕರೊಂದಿಗೆ ಭೇಟಿ ನೀಡಿ ಸಮಸ್ಯೆ ವಿವರಿಸಿದರೂ ಸಮಸ್ಯೆ ಬಗೆಹರಿಸಿಲ್ಲ. ಈ ಕುರಿತು ನಿರ್ಮಲಾ ಸೀತಾರಾಮನ್ ಆಗಲಿ ಅಮಿತ್ ಶಾ ಆಗಲಿ ಇದುವರೆಗೂ ಸಭೆ ನಡೆಸಿಲ್ಲ ಇದು ಕನ್ನಡಿಗರಿಗೆ ಮಾಡಿದ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದರು.
ನಮ್ಮಲ್ಲಿ ಇನ್ನೂ ಕೂಡ ಬಡತನ, ಅನಕ್ಷರತೆ ಮಾಢ್ಯ ಅಸ್ಪೃಶ್ಯತೆ ನಿವಾರಣೆ ಆಗಿಲ್ಲ ಹಾಗಾಗಿ ಜಾತಿ ಗಣತಿ ಮಾಡಿಸಿದ ವರದಿ ಬಂದಿದ್ದು ಪರಿಶೀಲಿಸಿ ನಂತರ ಸರ್ಕಾರ ಉತ್ತಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶ್ರೇಯಸ್ ರವರ ತಾಯಿ ಅನುಪಮಾ ಅವರು ಮತ ನೀಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. ಶಾಸಕ ಕೆ.ಎಸ್ ಆನಂದ್ , ಮಾಜಿ ಸಚಿವ ಬಿ.ಎಲ್.ಶಂಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಸಚಿನ್ ಮೀಗಾ, ಭಂಡಾರಿ ಶ್ರೀನಿವಾಸ್, ತೋಟದ ಮನೆಮೋಹನ್, ಕೆ.ಜಿ. ಶ್ರೀನಿವಾಸ ಮೂರ್ತಿ,ಈರಳ್ಳಿ ರಮೇಶ್, ಕಂಸಾಗರ ಸೋಮಶೇಖರ್, ಅಬಿದ್ ಪಾಷಾ, ಇಮ್ರಾನ್ ಖಾನ್ , ಯಾಸೀನ್, ಕೆ.ಎಸ್.ತಿಪ್ಪೇಶ್,ಸಾಣೇಹಳ್ಳಿ ಆರಾಧ್ಯ,ರೇವಣ್ಣ ಸೇರಿದಂತೆ ಮತ್ತಿತರರು ಇದ್ದರು, -- ಬಾಕ್ಸ್--ಮಾಜಿ ಪ್ರಧಾನಿ ದೇವೇಗೌಡರು ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಕೈಜೋಡಿಸುವುದಿಲ್ಲ. ಬಿಜೆಪಿ ಕೋಮುವಾದಿ ಪಕ್ಷ ಮೋದಿ ಅಧಿಕಾರಕ್ಕೆ ಬಂದರೆ ದೇಶ ತೊರೆಯುವುದಾಗಿ ಹೇಳಿದ್ದರು. ಅಲ್ಲದೆ ಮುಂದಿನ ಜನ್ಮವಿದ್ದರೆ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದಿದ್ದರು ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ ಇದೀಗ ಬಾಯಿ ಬಾಯಿ ಎಂದು ಬಿಜೆಪಿ ಜೊತೆ ಕೈಜೋಡಿಸಿದ್ದಾರೆ.ಅವರ ಕುಟುಂಬದ ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ಸ್ವಾರ್ಥಕ್ಕಾಗಿ ಸುಳ್ಳು ಹೇಳ್ತಿದ್ದಾರೆ. ಗೌಡರು, ಸಿದ್ದರಾಮಯ್ಯನವರ ಗರ್ವಭಂಗ ಮಾಡುತ್ತೇನೆ ಎಂದಿದ್ದು ನನಗೆ ಅಹಂಕಾರ ಇದ್ದರೆ ತಾನೇ ಎಂದು ಟಾಂಗ್ ನೀಡಿದರು.
22kkdu1,2,3.