ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ತಿಂಗಳ 8ರೊಳಗೆ ಪ್ರವಾಸ ಪೂರ್ಣಗೊಳಿಸಿ ಪ್ರವಾಸ ಪೂರ್ಣಗೊಂಡ ನಂತರ ಇಡೀ ವರದಿಯನ್ನು ಭಾವಚಿತ್ರಗಳ ಸಹಿತ ರಾಜ್ಯ ಕಾರ್ಯಾಲಯಕ್ಕೆ ಕಳುಹಿಸಿಕೊಡಬೇಕು ಎಂದು ತಿಳಿಸಿದ್ದಾರೆ.ಕಳೆದ ಹಲವು ದಿನಗಳಿಂದ ಇಡೀ ರಾಜ್ಯದಲ್ಲಿ ವ್ಯಾಪಕವಾದ ಮಳೆ ಬಂದು ಜನಜೀವನ ಅಸ್ತವ್ಯಸ್ತವಾಗಿರುವುದು ತಮಗೆಲ್ಲ ತಿಳಿದ ವಿಷಯ. ರಾಜ್ಯದ ಜನತೆ ಸತತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಬಳಲುತ್ತಿದ್ದರೂ, ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗಿದ್ದರೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದಾಗಲಿ, ನೊಂದ ಜನತೆಗೆ ಸಾಂತ್ವನ ಹೇಳುವ ಕಾರ್ಯವನ್ನಾಗಲಿ ಮಾಡಿಲ್ಲ. ರೈತರಿಗೆ ಸೂಕ್ತ ಪರಿಹಾರ ನೀಡುವ ಕೆಲಸವನ್ನು ಸಂಪೂರ್ಣವಾಗಿ ಮರೆತು ಗಾಢನಿದ್ದೆಯಲ್ಲಿ ಮುಳುಗಿದೆ ಎಂದು ಹೇಳಿದ್ದಾರೆ.
ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೈಮರೆತ ಸರ್ಕಾರವನ್ನು ಎಚ್ಚರಿಸಬೇಕಾಗಿರುವುದು ಪ್ರತಿಪಕ್ಷವಾಗಿ ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಪ್ರವಾಸ ಕೈಗೊಂಡು ವಿಳಂಬವಿಲ್ಲದೆ ರಾಜ್ಯ ಕಾರ್ಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕಾಗಿದೆ. ಈ ಭೇಟಿ ವೇಳೆ ಮಳೆಯಿಂದ ಹಾನಿಗೀಡಾದ ಕೃಷಿ ಪ್ರದೇಶಗಳ ಭೇಟಿ ಜೊತೆಗೆ ನೊಂದ ಕುಟುಂಬಗಳನ್ನು ಭೇಟಿಯಾಗಬೇಕು ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ವರದಿಯನ್ನು ತಯಾರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು 9ರಿಂದ ಜೆಡಿಎಸ್ ರಾಜ್ಯ ಪ್ರವಾಸ:ರಾಜ್ಯದ ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಇದೇ ತಿಂಗಳ 9ರಿಂದ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಮ್ಮ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಬಹಳಷ್ಟು ಹಾನಿಯಾಗಿದೆ. ಜೆಡಿಎಸ್ ಎಲ್ಲಾ ನಾಯಕರು ಚರ್ಚೆ ಮಾಡಿದ್ದೇವೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಇದಕ್ಕಾಗಿ ಎರಡು ತಂಡ ಮಾಡಿದ್ದೇವೆ. ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ ಎಂದರು.-ಬಾಕ್ಸ್-
ಪ್ರವಾಸದ ತಂಡಗಳ ಮಾಹಿತಿ:ಮಾಜಿ ಸಚಿವ ವೆಂಕಟರಾವ್ ನೇತೃತ್ವದ ತಂಡವು ಸೆ.9ರಿಂದ 11ರ ವರೆಗೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ ಮತ್ತು ಯಾದಗಿರಿ ನೆರೆಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಲಿದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ನೇತೃತ್ವದ ತಂಡವು ಸೆ.13 ಮತ್ತು 14ರಂದು ಮಲೆನಾಡು ಪ್ರದೇಶದ ಜಿಲ್ಲೆಗಳಾದ ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರಿನ ನೆರೆಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಲಿದೆ. ಈ ತಂಡಗಳಲ್ಲಿ ಆ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಆಯಾಯ ಜಿಲ್ಲಾಧ್ಯಕ್ಷರು ಇರಲಿದ್ದಾರೆ.