ಸಸನವಲಗುಂದ:
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಕಾರ್ಯಕರ್ತರು
ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಪಕ್ಷದ ಶಾಸಕರು, ಮುಖಂಡರ ನೇತೃತ್ವದಲ್ಲಿ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸಿಕೊಂಡು ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.
ಮುಖಂಡ ಪಿ.ಕೆ. ನೀರಲಕಟ್ಟಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್ಸಿನ ಕಟ್ಟಾಳು ಆಗಬೇಕು. ವಿನೋದ ಅವರ ಸೇವೆ ಮೆಚ್ಚಿ ಹೈಕಮಾಂಡ್ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಜೆಪಿ ಜಾತಿಯತೆ ಮತ್ತು ಮೋದಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದೆ. ನಾವು ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಹೆಸರು ಹೇಳಿ ಅವರ ದಾರಿದೀಪದಲ್ಲಿ ನಡೆಯಬೇಕು ಎಂದ ಅವರು, 20 ವರ್ಷ ಕಳೆದರೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಮಹದಾಯಿ ನೀರು ಹರಿಸಲು ಸಾಧ್ಯವಾಗಿಲ್ಲ. ವಿನೋದ ಗೆಲ್ಲಿಸಿದರೆ ಯೋಜನೆ ಜಾರಿಗೊಳಿಸಲಿದ್ದಾರೆ ಎಂದರು.ಈ ವೇಳೆ ಪ್ರಕಾಶಗೌಡ ಪಾಟೀಲ, ವ್ಹಿ.ಪಿ. ಪಾಟೀಲ, ಶಾಂತವ್ವ ಗುಜ್ಜಳ, ವರ್ಧಮಾನಗೌಡ ಹಿರೇಗೌಡರ, ವಿಜಯಕುಮಾರ ಪಾಟೀಲ, ಬಾಪುಗೌಡ ಪಾಟೀಲ, ರೋಣದ, ಆರ್.ಎಚ್. ಕೋನರಡ್ಡಿ, ಬಿ.ಡಿ. ಅಂದಾನಗೌಡ್ರ, ಮಂಜುನಾಥ ಮಾಯಣ್ಣವರ, ಮಂಜುನಾಥ ಜಾಧವ, ಜೀವನ ಪವಾರ, ಸುಲೇಮಾನ ನಾಶಿಪುಡಿ, ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲೂಕು ಮುಖಂಡರು, ಕಾರ್ಯಕರ್ತರು ಇದ್ದರು.