ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ಹುಡ್ಕೋ ಬಡಾವಣೆಯಲ್ಲಿನ ಗೃಹ ಕಚೇರಿಯಲ್ಲಿ ಭಾನುವಾರ ಪಕ್ಷದ ತಾಲೂಕು ಎಸ್ಸಿ, ಎಸ್ಟಿ ಘಟಕದ ನೂತನ ಅಧ್ಯಕ್ಷ ಶ್ರೀಕಾಂತ ಚಲವಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಸಿ.ಜೆ.ವಿಜಯಕರಗೆ ಸನ್ಮಾನಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಬಡವರ, ದೀನ, ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ, ಮಹಿಳೆಯರ, ರೈತರ ಪರ ಕಾಳಜಿ ಇರುವ ಪಕ್ಷ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಆಡಳಿತ ನಡೆಸುತ್ತಿದೆ. ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಇದನ್ನು ಸಹಿಸದ ಬಿಜೆಪಿಯವರು ಜನರಿಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.ರಾಜ್ಯದಲ್ಲಿ ಈ ಹಿಂದಿದ್ದ ಬಿಜೆಪಿ ಸರ್ಕಾರದಲ್ಲಿ ಅನುದಾನ ಮಂಜೂರು ಮಾಡದೇ ಬೇಕಾಬಿಟ್ಟಿ ಕಾಗದ ಪತ್ರ ತಯಾರಿಸಿ ಅವೈಜ್ಞಾನಿಕವಾಗಿ ಎಸ್ಸಿ, ಎಸ್ಟಿ ವರ್ಗದವರ ಎಸ್ಇಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ ಕಾಮಗಾರಿ ಕೈಗೊಂಡು ಗುತ್ತಿಗೆದಾರರಿಗೆ ಅನುದಾನ ಬಿಡುಗಡೆ ಮಾಡದೆ ಹೋಗಿದ್ದಾರೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಪೆಟ್ಟಾಗಿದೆ. ಗುತ್ತಿಗೆದಾರರು ತೀರಾ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತಹಂತವಾಗಿ ಗುತ್ತಿಗೆದಾರರ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ಮಾರ್ಚ್ ಬಜೆಟ್ನಲ್ಲಿ ರಸ್ತೆ, ಮನೆ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು ಎಂದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವೈ.ಎಚ್. ವಿಜಯಕರ, ವಿಜೇಂದ್ರ ಇಲಕಲ್ಲ, ಬಹಾದ್ದೂರ್ ರಾಠೋಡ, ಲಕ್ಷ್ಮಣ ಲಮಾಣಿ, ರಾಜೇಂದ್ರಗೌಡ ರಾಯಗೊಂಡ, ಯಲ್ಲಪ್ಪ ಚಲವಾದಿ, ಗೋಪಿ ಮಡಿವಾಳರ ಸೇರಿದಂತೆ ಹಲವರು ಇದ್ದರು.