ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದ ಬಿಜೆಪಿ

KannadaprabhaNewsNetwork |  
Published : Apr 28, 2024, 01:25 AM IST
27 ಐಗಳಿ 01 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಐಗಳಿ: ಬಿಜೆಪಿ ಅಧಿಕಾರಕ್ಕೆ ಬಂದ 10 ವರ್ಷಗಳಲ್ಲಿ ದೇಶಕ್ಕೆ ಏನು ಮಾಡಿಲ್ಲ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದರು. ಅವರು ಅಧಿಕಾರದಲ್ಲಿದ್ದಾಗ ನೀಡಿದ ಕೊಡುಗೆ ಏನೆಂದು ಆತ್ಮಾವಲೋಕನ ಮಾಡಿಕೊಂಡು ಇಂದು ಮತ ಚಲಾಯಿಸಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕನ್ನಡಪ್ರಭ ವಾರ್ತೆ ಐಗಳಿ ಬಿಜೆಪಿ ಅಧಿಕಾರಕ್ಕೆ ಬಂದ 10 ವರ್ಷಗಳಲ್ಲಿ ದೇಶಕ್ಕೆ ಏನು ಮಾಡಿಲ್ಲ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದರು. ಅವರು ಅಧಿಕಾರದಲ್ಲಿದ್ದಾಗ ನೀಡಿದ ಕೊಡುಗೆ ಏನೆಂದು ಆತ್ಮಾವಲೋಕನ ಮಾಡಿಕೊಂಡು ಇಂದು ಮತ ಚಲಾಯಿಸಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಸಮೀಪದ ಸತ್ತಿ, ಮಹಿಷವಾಡಗಿ, ಸವದಿ, ಸವದಿದರ್ಗಾ, ಜನವಾಡ, ನಂದೇಶ್ವರ ಹಾಗೂ ರಡ್ಡೇರಹಟ್ಟಿ ಗ್ರಾಮಗಳಲ್ಲಿ ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಚುನಾವಣೆ ವೇಳೆ ಮತದಾರರಿಗೆ ಕೊಟ್ಟ 5 ಗ್ಯಾರಂಟಿಗಳ ಭರವಸೆಯನ್ನು ಅನುಷ್ಠಾನಕ್ಕೆ ತಂದಿದೆ. ಈಗ ಬಡ ಕುಟುಂಬದ ಜನರಿಗೆ ಈ ಯೋಜನೆಗಳು ಆಸರೆಯಾಗಿವೆ. ದೇಶಕ್ಕೆ ಈಗ ಕರ್ನಾಟಕ ಮಾದರಿಯ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲೂ ರಚನೆಯಾದರೇ ಗ್ಯಾರಂಟಿಗಳು ಅನುಷ್ಠಾನಕ್ಕೆ ಬರಲಿವೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂದು ಕೋರಿದರು.

ಉದ್ಯಮಿ ಸದಾಶಿವ ಬುಟಾಳಿ ಮಾತನಾಡಿ, ಅಣ್ಣಾಸಾಹೇಬ ಜೊಲ್ಲೆಯವರ ಸಾಧನೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಶೂನ್ಯವಾಗಿದೆ. ಈಗ ಮೋದಿ ಹೆಸರಿನಲ್ಲಿ ಪ್ರಚಾರ ನಡೆಸಿ ಹೆಸರುವಾಸಿಯಾಗುತ್ತಿದ್ದಾರೆ ವಿನಃ ಅವರದ್ದೇನು ಇಲ್ಲ ಎಂದು ಲೇವಡಿ ಮಾಡಿದರು.

ಈ ವೇಳೆ ಕೆಪಿಸಿಸಿ ಸದಸ್ಯ ಚಿದಾನಂದ ಮುಕಣಿ, ವಕೀಲ ಧರೆಪ್ಪ ಠಕ್ಕಣ್ಣವರ, ಸುಶೀಲಕುಮಾರ ಪತ್ತಾರ ಮಾತನಾಡಿದರು. ಬಿ.ಬಿ.ಬಿಸಲಾಪುರ, ಮಹಾದೇವ ಗಲಗಲಿ, ಕೆಎಂಎಫ್ ನಿರ್ದೇಶಕ ಮಹಾದೇವ ಬಿಳಿಕುರಿ, ಶ್ರೀಶೈಲ ಗಸ್ತಿ, ಮಲ್ಲಪ್ಪ ಅವಟಿ, ವಿವೇಕ ಯಲಗುದ್ದರಿ, ಮುರಗೇಪ್ಪ ಬಾವಿ, ಅಶೋಕ ಸನಾಳ, ಶ್ರೀಶೈಲ ದುಲಾರಿ, ಬಸಗೊಂಡ ಮುಗ್ಗನವರ, ಮೋಹನ ದೊಡಮನಿ, ಜಡೆಪ್ಪ ಕುಂಬಾರ, ರಾಹುಲ ಮಾಚಕನೂರ, ಅಶೋಕ ಚಿಟೆ, ಮಲ್ಲಪ್ಪ ಬ್ಯಾಳಿಗೌಡರ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳವಳ್ಳಿಯಲ್ಲಿ ಕೋರೆಗಾಂವ್ ವಿಜಯೋತ್ಸವ ಆಚರಣೆ
ಶಿಲ್ಪಿ ಜಕಣಾಚಾರಿ ಎಂದೆಂದಿಗೂ ಅಮರ