ಭಾವನಾತ್ಮಕ ವಿಷಯ ಮುಂದಿಟ್ಟು ಬಿಜೆಪಿ ಮತ ಕೇಳುತ್ತಿದೆ: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

KannadaprabhaNewsNetwork |  
Published : Apr 20, 2024, 01:06 AM IST
ಫೋಟೊ ಶೀರ್ಷಿಕೆ: 19ಆರ್‌ಎನ್‌ಆರ್3ರಾಣಿಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆರ್ಸ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ರೋಡ್ ಶೋ ಮೂಲಕ ಮತ ಯಾಚನೆ ಮಾಡಿದರು. ಶಾಸಕ ಪ್ರಕಾಶ ಕೋಳಿವಾಡ ಇದ್ದರು.  | Kannada Prabha

ಸಾರಾಂಶ

ಬಿಜೆಪಿ ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಆ ಪಕ್ಷಕ್ಕೆ ಜನರ ಬಳಿ ಮತ ಕೇಳಲು ಯಾವುದೇ ವಿಷಯಗಳಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ್ದೇವೆ ಎಂದು ಬೀಗುವ ಬಿಜೆಪಿ ಮತದಾರರ ಓಲೈಕೆಗೆ ಧರ್ಮ ಮತ್ತು ಜಾತಿಗಳ ಮಧ್ಯೆ ಕಂದಕ ಸೃಷ್ಟಿಸುತ್ತಿದೆ. ಇದಕ್ಕೆ ಅಪವಾದವೆಂಬಂತೆ ಚಳಗೇರಿಯ ಸರ್ವಧರ್ಮ ಮತ್ತು ಸರ್ವ ಜಾತಿಯವರು ಸೇರಿಕೊಂಡು ರಾಮ ಮಂದಿರ ನಿರ್ಮಿಸಿ ಭಾವೈಕ್ಯ ಮೆರೆದಿರುವುದು ಅಭಿನಂದನೀಯ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ತಾಲೂಕಿನ ಚಳಗೇರಿ ಗ್ರಾಮದಲ್ಲಿ ಗುರುವಾರ ರಾತ್ರಿ ಲೋಕಸಭಾ ಚುನಾವಣಾ ಪ್ರಚಾರ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಮಾತನಾಡಿದರು.

ಬಿಜೆಪಿ ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಆ ಪಕ್ಷಕ್ಕೆ ಜನರ ಬಳಿ ಮತ ಕೇಳಲು ಯಾವುದೇ ವಿಷಯಗಳಿಲ್ಲ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ್ದೇವೆ ಎಂದು ಬೀಗುತ್ತಿದೆ. ನಮ್ಮ ಕಾಂಗ್ರೆಸ್ ಪಕ್ಷದಲ್ಲೂ ರಾಮನ ಭಕ್ತರಿದ್ದಾರೆ. ಆದರೆ, ಅವರ‍್ಯಾರೂ ರಾಮನನ್ನು ರಾಜಕಾರಣಕ್ಕೆ ಬಳಸಿಕೊಳಲ್ಲ. ವಿಶೇಷವಾಗಿ, ಗ್ರಾಮದ ವಾಲ್ಮೀಕಿ, ಲಿಂಗಾಯತ, ಮರಾಠಾ, ಕುರುಬ ಮತ್ತು ಮುಸಲ್ಮಾನರು ಸಂಗ್ರಹಿಸಿದ ವಂತಿಗೆಯಿಂದ ರಾಮ ಮಂದಿರ ನಿರ್ಮಿಸಿ ನಮ್ಮ ನೆಲದ ಬಾವೈಕ್ಯ ಪ್ರದರ್ಶಿಸಿರುವುದು ನಾಡಿನ ಹೆಮ್ಮೆ. ಜೊತೆಗೆ ಕಾಂಗ್ರೆಸ್ ಪಕ್ಷವೂ ಸಹಿತ ಎಲ್ಲ ಸಮುದಾಯಗಳನ್ನು ಸಮಭಾವದಿಂದ ಕಾಣುತ್ತದೆ ಎಂದರು.

ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಮ್ಮ ಬಳಿ ಬಂದು ಇದು ನನ್ನ ಕೊನೆಯ ಚುನಾವಣೆ. ದಯವಿಟ್ಟು ನನ್ನನ್ನು ಗೆಲ್ಲಿಸಿ ಎಂದು ಮಾತಿನ ಮೋಡಿ ಮಾಡಬಹುದು. ಅವರ ಮಾತಿಗೆ ಮರುಳಾಗದೇ ಯಾವ ಅಭಿವೃದ್ಧಿ ಕಾರ್ಯ ಮಾಡಿದ್ದೀರಿ ಎಂದು ಪ್ರಶ್ನಿಸಿರಿ. ಕೆ.ಎಸ್. ಈಶ್ವರಪ್ಪನವರ ಪುತ್ರ ಕಾಂತೇಶಗೆ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿಸಿದ್ದನ್ನು ಜನರು ಮರೆತಿಲ್ಲ. ಬೊಮ್ಮಾಯಿ ಅವರನ್ನು ಸೋಲಿಸಲೆಂದೇ ಆರ್. ಶಂಕರ್ ಮತ್ತು ನಾವು ಒಂದಾಗಿದ್ದೇವೆ. ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸುವ ಮೂಲಕ ಜಿಲ್ಲೆಯನ್ನು ನಿರುದ್ಯೋಗ ಮುಕ್ತವನ್ನಾಗಿಸಲು ಉದ್ಯಮ ಸ್ಥಾಪಿಸಲಾಗುವುದು. ನನ್ನ ಕೈಬಲಪಡಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಹಾರೈಸಬೇಕು ಎಂದು ಮನವಿ ಮಾಡಿದರು.

ಗ್ರಾಮೀಣ ಘಟಕದ ಅಧ್ಯಕ್ಷ ಮಂಜನಗೌಡ ಪಾಟೀಲ ಮಾತನಾಡಿ, ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ದೇಶದ ಏಳ್ಗೆ ಬಯಸಿದೆ. ಉಳುವವನೇ ಭೂ ಒಡೆಯ, ದೇಶಾದ್ಯಂತ ನೀರಾವರಿಗೆ ಅಣೆಕಟ್ಟು ನಿರ್ಮಾಣ, ಬಡವರಿಗೆ ಸಾಲ ನೀಡದ ಸಂದರ್ಭದಲ್ಲಿ ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ ಶ್ರೇಯಸ್ಸು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಲ್ಲುತ್ತದೆ. ಬಿಜೆಪಿ ಕೇವಲ ಉದ್ಯಮಿಗಳ ಸಾಲ ಮನ್ನಾ ಮಾಡುವುದರಲ್ಲಿ ಆಸಕ್ತಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ವಿರೋಧಿ ಬಿಜೆಪಿಯನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ರಾಮ ಮಂದಿರ ಮತ್ತು ಶ್ರೀ ಮಹಾಂತೇಶ್ವರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಶೇರುಖಾನ್ ಕಾಬೂಲಿ, ಮುಖಂಡರಾದ ವೆಂಕಪ್ಪ ಮಾದಾಪುರ, ರಾಜು ಪಾಟೀಲ, ಭೀಮರಡ್ಡಿ ಕೆಂಚರಡ್ಡಿ, ಗುಡಾನಸಾಬ ದೊಡ್ಡಮನಿ, ಚಂದ್ರಪ್ಪ ಬೆನಕನಕೊಂಡ, ನಾಗರಾಜ ಅಂಗಡಿ, ಉಜನಪ್ಪ ಗ್ಯಾನಗೌಡ್ರ, ಪುಟ್ಟಪ್ಪ ಮರಿಯಮ್ಮನವರ, ಪರಶುರಾಮ ಕೆಂಚರಡ್ಡಿ, ರಾಜು ತಗ್ಗಿನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ