ಗಜೇಂದ್ರಗಡ: ಪಟ್ಟಣದಲ್ಲಿ ಅಹಿಂದ ವರ್ಗದಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಜಿ.ಎಸ್.ಪಾಟೀಲ ಹಲವಾರು ವಿಚಾರಗಳೊಂದಿಗೆ ಪ್ರಸ್ತಾಪಿಸಿದ ವಿಷಯವನ್ನು ಬಿಜೆಪಿಯವರು ತಿರುಚಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಶಿವರಾಜ ಘೋರ್ಪಡೆ ಹೇಳಿದರು.
ಮುಖಂಡ ಸಿದ್ದಪ್ಪ ಬಂಡಿ ಮಾತನಾಡಿ, ಬಿಜೆಪಿ ನಾಯಕರು ನಮ್ಮ ಶಾಸಕರ ಹೇಳಿಕೆ ತಿರುಚಿ ಅದನ್ನು ಜನಸಾಮಾನ್ಯರ ತಲೆಯಲ್ಲಿ ತುಂಬುತ್ತಿದ್ದಾರೆ. ವಿಪಕ್ಷಗಳ ನಾಯಕರ ಮೇಲೆ ಇಡಿ,ಸಿಬಿಐ ದಾಳಿ ಮೂಲಕ ಕೇಂದ್ರ ಸರ್ಕಾರ ಅಧಿಕಾರ ದುರಪಯೋಗ ಅತಿಯಾದರೆ ಜನ ದಂಗೆ ಏಳುತ್ತಾರೆ, ನಿಮ್ಮನ್ನು ಹಾಗೆ ಬಿಡುವದಿಲ್ಲ ಎಂದು ಸಾಂದರ್ಭಿಕವಾಗಿ ಹೇಳಿದ್ದಾರೆ ಎಂದರು.
ಮುಖಂಡ ಬಿ.ಎಸ್. ಶೀಲವಂತರ, ವಕೀಲ ಎಚ್.ಎಸ್. ಸೋಂಪುರ ಮಾತನಾಡಿದರು. ವೀರಣ್ಣ ಶೆಟ್ಟರ, ಮುರ್ತುಜಾ ಡಾಲಾಯತ, ಪ್ರಶಾಂತ ರಾಠೋಡ, ಯಲ್ಲಪ್ಪ ಬಂಕದ, ಪ್ರಕಾಶ ದಿವಾಣದ, ಶರಣು ಪೂಜಾರ, ರಾಜು ಸಾಂಗ್ಲೀಕರ, ವೆಂಕಟೇಶ ಮುದಗಲ್, ಅಂದಪ್ಪ ಬಿಚ್ಚೂರ, ಬಸು ಚನ್ನಿ, ಸಿದ್ದು ಗೊಂಗಡಶೆಟ್ಟಿಮಠ ಸೇರಿ ಇತರರು ಇದ್ದರು.