- ಬಿಜೆಪಿ ಬೂತ್ಮಟ್ಟದ ಏಜೆಂಟರ ಮತಪಟ್ಟಿ ಪರಿಷ್ಕರಣೆ ಕಾರ್ಯಾಗಾರ
ಕನ್ನಡಪ್ರಭ ವಾರ್ತೆ ಜಗಳೂರು
ಬಿಜೆಪಿಯಲ್ಲಿ ಸಂಘಟನೆಯ ಪರ್ವ ಆರಂಭವಾಗಿದೆ. ಜಗಳೂರು ಕ್ಷೇತ್ರದಲ್ಲಿ ಬಿಜೆಪಿ ಬಲವಾಗಿದೆ. ಕಳೆದ ಬಾರಿ ಕೇವಲ ೮೦೦ ಮತಗಳಿಂದ ಸೋತಿದ್ದೇನೆ. ಮತ್ತೆ ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡಲು ಟೊಂಕಕಟ್ಟಿ ನಿಲ್ಲಲು ಪ್ರತಿಯೊಬ್ಬ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.ಪಟ್ಟಣದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಬಿಜೆಪಿ ಬೂತ್ಮಟ್ಟದ ಏಜೆಂಟ್ಗಳ (ಬಿಎಲ್ಎ-೨) ಮತಪಟ್ಟಿ ಪರಿಷ್ಕರಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಇನ್ನೆರಡು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಬರಲಿವೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಬೂತ್ ಮಟ್ಟದ ಏಜೆಂಟ್ಗಳಿಗೆ ತಿಳಿಸುವ ಮೂಲಕ ಬಿಜೆಪಿ ಏಜೆಂಟರ ಶಕ್ತಿ ಏನೆಂದು ತೋರಿಸಿ ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಡ್ಲೆಬಾಳು ಧನಂಜಯ, ಬಿಜೆಪಿ ಮುಖಂಡ ಬಿಸ್ತುವಳ್ಳಿ ಬಾಬು, ಡಿ.ವಿ.ನಾಗಪ್ಪ, ಬಿಜೆಪಿ ಮಂಡಲ ನೂತನ ಅಧ್ಯಕ್ಷ ಎ.ಎಂ. ಆರಾಧ್ಯ ಮಾತನಾಡಿದರು.
- - -
ಚುನಾವಣೆ ಬಂದರೆ ಬೂತ್ ಮಟ್ಟದಲ್ಲಿ ಬಲವರ್ಧನೆ ಮತ್ತು ಮತಪಟ್ಟಿ ಪರಿಷ್ಕರಣೆ ಅತ್ಯವಶ್ಯಕ. ಬಿಜೆಪಿಗೆ ತನ್ನದೇ ಆದ ನಿಯಮಗಳಿವೆ. ಬಹಳ ಮಹತ್ವವಾದ ಬೂತ್ಗಳ ಬಲವರ್ಧನೆ ಆಗಬೇಕು. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿ, ಹೊಸ ಮತಗಟ್ಟೆಗಳಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿ ಎಚ್ಚರದಿಂದ ಕಾರ್ಯನಿರ್ವಹಿಸೋಣ.
- - -
ಕಾರ್ಯಾಗಾರವನ್ನು ವಿಪ ಸದಸ್ಯ ಅರುಣ್ ಕುಮಾರ್ ಉದ್ಘಾಟಿಸಿದರು. ಮಾಜಿ ಶಾಸಕ ಎಸ್.ವಿ.ರಾಮಚಂದ್ರ., ಎಚ್.ಪಿ.ರಾಜೇಶ್ ಮತ್ತಿತರ ಗಣ್ಯರು ಇದ್ದರು.