ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಗ್ರಾಮೀಣ ಪ್ರದೇಶದ ಬಡಜನರ ಕಲ್ಯಾಣ ಮತ್ತು ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ಚಿಂತನೆಯೊಂದಿಗೆ ಸುಮಾರು ಆರು ತಿಂಗಳ ಕಾಲ ಎಲ್ಲಾ ರೀತಿಯ ಚರ್ಚೆಗಳು, ಸಭೆಗಳನ್ನು ನಡೆಸಿ ಮನ್ರೇಗಾ ಯೋಜನೆಯನ್ನು ಜಾರಿಗೆ ತಂದು ಕೋಟ್ಯಾಂತರ ಜನರಿಗೆ ಉದ್ಯೋಗ ನೀಡಿ ದೇಶದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಜೊತೆಗೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿತು. ಆದರೆ ಈಗ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಕೇವಲ 72 ಗಂಟೆಗಳಲ್ಲಿ ಯಾವುದೇ ಸಭೆ, ಸಂವಾದ ಚಿಂತನೆಗಳನ್ನು ನಡೆಸದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಪಡಿಸುವ ಮೂಲಕ ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದಾರೆ ಎಂದು ಆರೋಪಿಸಿದರು.
ಹೋರಾಟ ನಡೆಸಲಿದೆ:ದೇಶದ ಜನರ ಮನಸ್ಸಿನಿಂದ ರಾಷ್ಟ್ರ ಪಿತ ಮಹಾತ್ಮ ಗಾಂಧಿಯವರ ಹೆಸರನ್ನು ಅಳಸಿ ಹಾಕಿ ಸರ್ವಾಧಿಕಾರಿ ಆಡಳಿತದತ್ತ ದೇಶವನ್ನು ಕೊಂಡೊಯ್ಯುವ ಪ್ರಯತ್ನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಮಾಹಿತಿ ನೀಡಿದರು.
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ಗೊತ್ತಾಗುತ್ತಿದ್ದಂತೆ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು. ತಪ್ಪು ಆಗುವುದು ಗೊತ್ತಾಗುತ್ತಿದ್ದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಾಗೆಯೆ ನಮ್ಮ ಸರ್ಕಾರ ಕ್ರಮಕೈಗೊಂಡಿದೆ. ಜಿಲ್ಲೆಗಳಲ್ಲಿ ಇರುವಾಗ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ನ್ಯಾಯಾಂಗ ಇಲಾಖೆ, ಸಿಬಿಐ ಮುಂತಾದ ಇಲಾಖೆಗಳಲ್ಲೇ ಇಂತಹ ಪ್ರಕರಣ ಆಗಿವೆ. ಇವೆಲ್ಲಾ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತವೆ ಅಲ್ಲವೆ. ಅಲ್ಲಿ ಏನು ಕ್ರಮ ಆಗಿದೆ ಎಂದು ಪ್ರಶ್ನಿಸಿದರು.ತನಿಖೆ ನಡೆಯುತ್ತಿದೆ:
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ವಿರೋಧ ವಾಗಿ ಆಡಳಿತ ನಡೆಸುತ್ತಿದ್ದು, ಪಂಚಾಯತ್ ಗಳು ಮತ್ತು ರಾಜ್ಯ ಸರ್ಕಾರಗಳನ್ನು ನಿಷ್ಕ್ರಿಯ ಗೊಳಿಸುವ ಪ್ರಯತ್ನ ಪಡುತ್ತಿದೆ ಎಂದು ಆರೋಪಿಸಿದರು.
ಹಾಗಾದರೆ ಅಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಒಪ್ಪಿದ್ದಾರೆ ಎಂದು ಅರ್ಥವಲ್ಲವೇ ಎಂಬುದಾಗಿ ಮಾರ್ಮಿಕವಾಗಿ ಪ್ರಶ್ನೆ ಮಾಡಿದರು.
ವಿಶೇಷ ಅಧಿವೇಶನದಲ್ಲಿ ಚರ್ಚಿಸಿದ ನಂತರ ಹೋರಾಟವನ್ನು ನಡೆಸಲಾಗುವುದು ಎಂದು ಪೊನ್ನಣ್ಣ ವಿವರಿಸಿದರು.