ಕನ್ನಡಪ್ರಭ ವಾರ್ತೆ ಕುಂದಾಪುರ
ಅವರು ಕೋಟದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ಇತ್ತೀಚೆಗೆ ನಡೆದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ವ್ಯಾಪಕ ಅಕ್ರಮ ಎಸಗಿದೆ ಎಂದು ಆರೋಪಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಹಾರದಲ್ಲಿ 80 ಲಕ್ಷ ಹಾಗೂ ಹರಿಯಾಣದಲ್ಲಿ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ. ಇದು ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ನಿರ್ಲಜ್ಜ ಮೈತ್ರಿಗೆ ಸಾಕ್ಷಿ. ಈ ಅನೈತಿಕ ಗೆಲುವಿನ ವಿರುದ್ಧ ಯುವ ಕಾಂಗ್ರೆಸ್ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದರು.ಕುಂದಾಪುರದ ಶಾಸಕರು ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿಸಿ, ಅವರಿಗೆ ತಕ್ಕ ಪಾಠ ಕಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಜ್ಞಾನಪೀಠ ಪುರಸ್ಕೃತ ಶಿವರಾಮ ಕಾರಂತರು, ಕಾಶಿನಾಥ್, ಉಪೇಂದ್ರರಂತಹ ಸಾಧಕರನ್ನು ನಾಡಿಗೆ ನೀಡಿದ ಕುಂದಾಪುರದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅವರು ಇದೇ ವೇಳೆ ಕೊಂಡಾಡಿದರು.ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪಕ್ಷದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ ಮುಂತಾದವರಿದದ್ದರು.