ಶಂಕರ ಹಾವಿನಾಳ
ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಹೂಡಿದ್ದ ದಾವೆಗೆ ನಿರ್ಬಂಧ ತೆರವುಗೊಂಡು ಚುನಾವಣೆ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಪ್ರಕ್ರಿಯೆಗಳು ನಡೆಯದೇ ಇರುವುದು ಜಿಲ್ಲಾಧಿಕಾರಿಗಳ ಸೂಚನೆಗೆ ಯಾವ ಬೆಲೆ ಇಲ್ಲದಂತಾಗಿದೆ.
ಸುಪ್ರೀಂ ಕೋರ್ಟ್ನಲ್ಲಿ ಹೂಡಿದ್ದ ದಾವೆ ತೆರವುಗೊಂಡಿರುವುದರಿಂದ ರಾಜ್ಯ ಸರ್ಕಾರ ಆ.5ರಂದು ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿದೆ. ಪ್ರಕಟಿಸಿ ಮೀಸಲಾತಿಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರಲ್ಲಿ ಅಭ್ಯರ್ಥಿಗಳೇ ಇಲ್ಲದೆ ಇರುವುದೇ ಈ ಚುನಾವಣೆ ಪ್ರಕ್ರಿಯೆಯ ವಿಳಂಬಕ್ಕೆ ಕಾರಣ ಎನ್ನುವುದು ಬಿಜೆಪಿಯವರ ಕಣ್ಣು ಕೆಂಪಾಗಿಸುವಂತೆ ಮಾಡಿದೆ.ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕಿಡಿ:
ಬಿಜೆಪಿಗೆ ಅಧ್ಯಕ್ಷ ಸ್ಥಾನ ಸಲೀಸು, ಉಪಾಧ್ಯಕ್ಷಕ್ಕೆ ಪೈಪೋಟಿ:
ಚಡಚಣ ಪಪಂಗೆ 16 ಸದಸ್ಯರ ಬಲವಿದ್ದು, ಅಧಿಕಾರ ಹಿಡಿಯಲು 9 ಜನ ಸದಸ್ಯರ ಬೆಂಬಲ ಬೇಕು. ಈ ಪೈಕಿ ಬಿಜೆಪಿ 8, ಕಾಂಗ್ರೆಸ್ 4 ಹಾಗೂ ಪಕ್ಷೇತರ 4 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಎಸ್ಸಿಗೆ ಅಧ್ಯಕ್ಷ ಸ್ಥಾನ ಮೀಸಲಾಗಿದೆ. ಹೀಗಾಗಿ ಬಿಜೆಪಿಯಲ್ಲಿ ಮಾತ್ರ ಮೂವರು ಎಸ್ಸಿ ಅಭ್ಯರ್ಥಿಗಳಿದ್ದು, ಆಯ್ಕೆಯಾದ ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳಲ್ಲಿ ಎಸ್ಸಿ ಅಭ್ಯರ್ಥಿಗಳೇ ಇಲ್ಲದಿರುವುದು ಬಿಜೆಪಿಗೆನೇ ಅಧ್ಯಕ್ಷ ಪಟ್ಟ ಖಾತರಿಯಾಗಿದೆ.
ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿದೆ. 15ನೇ ವಾರ್ಡ್ನಿಂದ ಮಲ್ಲಿಕಾರ್ಜುನ ದೋತ್ರೆ, 10ನೇ ವಾರ್ಡ್ನಿಂದ ಬಾಲಾಜಿ ಗಾಡಿವಡ್ಡರ ಹಾಗೂ 7ನೇ ವಾರ್ಡ್ನಿಂದ ಸುರೇಖಾ ಬನಸೋಡೆ ಮಧ್ಯ ಅಧ್ಯಕ್ಷ ಗಾದಿಗೆ ಭಾರಿ ಪೈಪೋಟಿ ಶುರುವಾಗಿದ್ದು, ಕೊನೆಗೆ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆ ಹಾಕುವುದು ಎಂಬುವುದು ಕಾದು ನೋಡಬೇಕಿದೆ.
-------------------
ಪಟ್ಟಣ ಪಂಚಾಯತಿಯಾದ ಮೊದಲ ಚುನಾವಣೆಯಲ್ಲಿಯೇ ಬಿಜೆಪಿಯ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿಯೇ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಆದರೆ, ಈ ಬಾರಿ ಮೀಸಲಾತಿಯಿಂದ ಎಸ್ಸಿ ಅಭ್ಯರ್ಥಿಗಳು ಕಾಂಗ್ರೆಸ್ ಮತ್ತು ಪಕ್ಷೇತರವಾಗಿ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಇಲ್ಲದೇ ಇರುವುದು ಬಿಜೆಪಿಗೆ ಅಧ್ಯಕ್ಷಗಿರಿ ಒಲಿದು ಬಂದಿದೆ. ಮೊದಲ ಚುನಾವಣೆಯ ಇತಿಹಾಸ ಮರುಕಳಿಸಿದ್ದು, ಈ ಬಾರಿ ಪಕ್ಷೇತರ ಅಭ್ಯರ್ಥಿಯ ಬೆಂಬಲದೊಂದಿಗೆ ಬಿಜೆಪಿ ಅಭ್ಯರ್ಥಿ ಅಧ್ಯಕ್ಷರಾಗುತ್ತಿರುವುದು ರಾಜಕೀಯ ಕಾಕತಾಳೀಯ ಎನ್ನುವಂತಾಗಿದೆ.
ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕಟಗೊಂಡಿದೆ. ಅದರಂತೆ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸುವಂತೆ ಆದೇಶ ಮಾಡಿದ್ದಾರೆ. ಆದಷ್ಟು ಬೇಗನೆ ಚುನಾವಣೆ ನಡೆಸಲಾಗುವುದು.
-ಸಂಜಯ ಇಂಗಳೆ, ತಾಲೂಕು ದಂಡಾಧಿಕಾರಿಗಳು ಚಡಚಣ.--------
ಈ ಬಾರಿ ಬಹುತೇಕ ಮೀಸಲಾತಿ ಬಿಜೆಪಿ ಪಕ್ಷದ ಪರವಾಗಿಯೇ ಬಂದಂತಾಗಿದೆ. ಬಿಜೆಪಿಯಿಂದ 8 ಅಭ್ಯರ್ಥಿಗಳು ಇದ್ದಾರೆ. ಪಕ್ಷೇತರ ಅಭ್ಯರ್ಥಿಯ ಬೆಂಬಲದೊಂದಿದೆ ಅದ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹೈಕಾಂಡ್ ನಿರ್ಧಾರದಂತೆ ಅಭ್ಯರ್ಥಿಗಳ ಆಯ್ಕೆಯಾಗಲಿದ್ದಾರೆ. ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳಲ್ಲಿ ಅಧ್ಯಕ್ಷ ಗಾದಿಗೆ ಪೈಪೋಟಿ ಮಾಡಲು ಪರಿಶಿಷ್ಟ ಜಾತಿಯ ಸದಸ್ಯರೇ ಇಲ್ಲದಿರುವುದರಿಂದ ಅಧ್ಯಕ್ಷ ಹುದ್ದೆಗೆ ಪೈಪೋಟಿಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.- ಕಾಂತುಗೌಡ ಪಾಟೀಲ, ಅಧ್ಯಕ್ಷರು ಬಿಜೆಪಿ ಮಂಡಲ ಚಡಚಣ.
------------ಸರ್ಕಾರ ರೋಸ್ಟರ್ ಪ್ರಕಾರ ಮೀಸಲಾತಿ ಪ್ರಕಟಗೊಳಿಸಿದೆ. ಅಧ್ಯಕ್ಷ ಮೀಸಲಾತಿ ಪರಿಶಿಷ್ಟ ಜಾತಿ ಬಂದಿರುವುದರಿಂದ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಗಳು ನಮ್ಮ ಪಕ್ಷದಲಿಲ್ಲ. ಉಪಾಧ್ಯಕ್ಷ ಗದ್ದುಗೇರಲು ರಣತಂತ್ರ ರೂಪಿಸುತ್ತೇವೆ.
-ಆರ್.ಡಿ.ಹಕ್ಕೆ ಅಧ್ಯಕ್ಷರು, ಕಾಂಗ್ರೆಸ್ ಮಂಡಲ ಚಡಚಣ.-------------
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನಮ್ಮ ಸದಸ್ಯರು ಗದ್ದುಗೆ ಏರುವುದು ನಿಶ್ಚಿತ. ಸಂಸದರು, ಜಿಲ್ಲಾ ಅಧ್ಯಕ್ಷರು, ಮಂಡಲ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಸೇರಿಕೊಂಡು ಯಾರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮಾಡಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲಿದ್ದೇವೆ.-ಸಂಜೀವ ಐಹೊಳ್ಳಿ ಬಿಜೆಪಿ ಮುಖಂಡ.