ಕೊಪ್ಪಳ:
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಹೊರೆಯಾಗುವ ರೀತಿ ರಾಜ್ಯ ಸರ್ಕಾರ ದರ ಏರಿಸಿಲ್ಲ. ರೈತರಿಗೆ ಹಣ ನೀಡಲು ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಸಾಮಾನ್ಯರ ಜೀವನ ನಡೆಸಲು ಕಷ್ಟವಾಗುವಂತೆ ಬೆಲೆ ಏರಿಕೆ ಮಾಡಿದ್ದಾರೆ. ಇತ್ತಿಚೆಗೆ ಸಿಲಿಂಡರ್ ಬೆಲೆ ₹ 50 ಹೆಚ್ಚಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುವುದು ಸೂಕ್ತವೆಂದು ಹೇಳಿದರು. ರಾಜ್ಯ ಸರ್ಕಾರ ಹೆಚ್ಚಿಸಿರುವ ಬೆಲೆ ಇತರ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡದರು.
ಕಾರ್ಖಾನೆ ಆರಂಭವಾಗಲ್ಲ:ನಗರದ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಬಿಎಸ್ಪಿಎಲ್ ಕಾರ್ಖಾನೆ ಯಾವುದೇ ಕಾರಣಕ್ಕೂ ಪ್ರಾರಂಭವಾಗಲ್ಲ. ಈ ಕುರಿತು ಸಿಎಂ ಹೇಳಿದ್ದಾರೆ. ಜತೆಗೆ ಕೈಗಾರಿಕೆ ಸಚಿವರು ಸಹ, ಸ್ಥಳೀಯರ ಸಮ್ಮತಿ ಇಲ್ಲದೆ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಾರ್ಖಾನೆ ಕಾಮಗಾರಿ ಪ್ರಾರಂಭಿಸಿರುವುದನ್ನು ಸ್ಥಗಿತಗೊಳಿಸಿದ್ದು ಅಲ್ಲಿ ಯಾವ ಕಾಮಗಾರಿ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂಗಣ್ಣ ಕರಡಿ ಮಾಜಿ ಸಂಸದ