ಕನ್ನಡಪ್ರಭ ವಾರ್ತೆ ಭಾರತೀನಗರ
ಸಂಗೊಳ್ಳಿರಾಯಣ್ಣ ಗ್ರಾಮೀಣಾಭಿವೃದ್ಧಿ ಸಂಘದ ಕಚೇರಿಯಲ್ಲಿ ನಡೆದ ಕುರುಬರ ಸಂಘದ ಸಭೆಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವನ್ನು ಪಥನಗೊಳಿಸಲು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಸಾಕಷ್ಟು ಹಗರಣಗಳನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಅವುಗಳೆಲ್ಲವನ್ನು ಜನರ ಮುಂದಿಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದರು.
ಸಿದ್ದರಾಮಯ್ಯ ಸರ್ಕಾರಕ್ಕೆ ಧಕ್ಕೆ ತರಲು ಮುಂದಾದರೆ ಹಿಂದುಳಿದ ಜನಾಂಗದವರು ಸೇರಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕೀಯ ಮಾಡುವುದಾದರೆ ಜನ ಬೆಂಬಲದಿಂದ ಆಯ್ಕೆಗೊಂಡು ಅಧಿಕಾರ ನಡೆಸಲಿ. ಅದನ್ನು ಬಿಟ್ಟು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.ಸಂಗೊಳ್ಳಿರಾಯಣ್ಣ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ರಂಗಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿರುವ ಜನೋಪಯೋಗಿ ಕೆಲಸ ಸಹಿಸಲಾಗದೆ ವಿಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಜನತೆಯೇ ನಿಮಗೆ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಉತ್ತರ ನೀಡುತ್ತಾರೆ ಎಂದು ಎಚ್ಚರಿಸಿದರು.