ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ

KannadaprabhaNewsNetwork |  
Published : Dec 16, 2023, 02:00 AM IST
ಜಮೀರ್  | Kannada Prabha

ಸಾರಾಂಶ

ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ಅಹ್ಮದ್ ಖಾನ್‌ ಸಮರ್ಥಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ಅಹ್ಮದ್ ಖಾನ್‌ ಸಮರ್ಥಿಸಿಕೊಂಡಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಸಿಕ್ಕು ಇಷ್ಟು ವರ್ಷಗಳಲ್ಲಿ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಕಾಂಗ್ರೆಸ್ ಮುಸ್ಲಿಮರಿಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯವರು ಯಾಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಅವರಿಗೆ ಚರ್ಚೆಗೆ ಬೇರೆ ವಿಷಯಗಳಿಲ್ಲ, ಹೀಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ ಎಂದು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ₹10 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇದು ಸ್ವಾಗತಾರ್ಹ, ಬಿಜೆಪಿಯವರು ಸಬ್ ಕಾ ವಿಕಾಸ್ ಅಂತಾ ಹೇಳಿ ಮುಸ್ಲಿಮರ ಅನುದಾನ ಕಡಿತ ಮಾಡಿದ್ದಾರೆ ಎಂದರು.

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವತ್ತೂ ಸಿದ್ದರಾಮಯ್ಯನವರ ಪರವಾಗಿದ್ದೇನೆ. ಸದ್ಯಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಅವರೇ ಇರುತ್ತಾರೆ. ಸದ್ಯಕ್ಕೆ ಖುರ್ಚಿ ಖಾಲಿ ಇಲ್ಲ ಎಂದರು.

ಎರಡೂವರೆ ವರ್ಷದ ನಂತರ ಡಿ.ಕೆ‌.‌ ಶಿವಕುಮಾರ್ ಸಿಎಂ ಆಗುತ್ತಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಲು ತಡಬಡಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!