ಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗರಿಗಿಲ್ಲ: ಶಾಸಕ ಅಬ್ಬಯ್ಯ

KannadaprabhaNewsNetwork |  
Published : Jun 10, 2025, 06:52 AM IST
9ಎಚ್‌ಯುಬಿ28ಪ್ರಸಾದ ಅಬ್ಬಯ್ಯ | Kannada Prabha

ಸಾರಾಂಶ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಇದೇ ವರ್ಷ ಫೆಬ್ರವರಿಯಲ್ಲಿ ಆದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದರು. ಆಗ ಯಾಕೆ ರೈಲ್ವೆ ಮಂತ್ರಿ ರಾಜೀನಾಮೆ ನೀಡಲಿಲ್ಲ? ಕೇಂದ್ರ ಸರ್ಕಾರ ಇದರ ಜವಾಬ್ದಾರಿ ಯಾಕೆ ಹೊರಲಿಲ್ಲ? ಮಹಾಕುಂಭ ಮೇಳದಲ್ಲಿ ವರ್ಷಾನುಗಟ್ಟಲೆ ಸಿದ್ಧತೆ ಮಾಡಿಕೊಂಡರೂ ನೂರಾರು ಜನ ಮೃತಪಟ್ಟರು. ಅಲ್ಲಿಯ ಮುಖ್ಯಮಂತ್ರಿ ರಾಜೀನಾಮೆ ಯಾಕೆ ಪಡೆಯಲಿಲ್ಲ?.

ಹುಬ್ಬಳ್ಳಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಗೆ ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ಮೊದಲು ಬಿಜೆಪಿ ನಾಯಕರು ತಮ್ಮ ಪಕ್ಷದ ಆಡಳಿತ ಇರುವ ರಾಜ್ಯಗಳಲ್ಲಿ ಎಷ್ಟು ಕಾಲ್ತುಳಿತಗಳು ಸಂಭವಿಸಿವೆ ಎಂಬುದನ್ನು ಕಣ್ಣು ತೆರೆದು ನೋಡಲಿ. ಮೊದಲು ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಿ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೆಹಲಿ ರೈಲ್ವೆ ನಿಲ್ದಾಣದಲ್ಲಿ ಇದೇ ವರ್ಷ ಫೆಬ್ರವರಿಯಲ್ಲಿ ಆದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದರು. ಆಗ ಯಾಕೆ ರೈಲ್ವೆ ಮಂತ್ರಿ ರಾಜೀನಾಮೆ ನೀಡಲಿಲ್ಲ? ಕೇಂದ್ರ ಸರ್ಕಾರ ಇದರ ಜವಾಬ್ದಾರಿ ಯಾಕೆ ಹೊರಲಿಲ್ಲ? ಮಹಾಕುಂಭ ಮೇಳದಲ್ಲಿ ವರ್ಷಾನುಗಟ್ಟಲೆ ಸಿದ್ಧತೆ ಮಾಡಿಕೊಂಡರೂ ನೂರಾರು ಜನ ಮೃತಪಟ್ಟರು. ಅಲ್ಲಿಯ ಮುಖ್ಯಮಂತ್ರಿ ರಾಜೀನಾಮೆ ಯಾಕೆ ಪಡೆಯಲಿಲ್ಲ? ಉತ್ತರ ಪ್ರದೇಶದ ಹಾತರಸ್ ಜಿಲ್ಲೆಯ ಪೂಲ್ ರಾಯ್ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ 116 ಮಂದಿ ಕಾಲ್ತುಳಿತದಲ್ಲಿ ಮೃತಪಟ್ಟರು. ಆಗ ಯಾಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ಪಡೆಯಲಿಲ್ಲ ಎಂದು ಪ್ರಶ್ನಿಸಿರುವ ಅವರು, ಇನ್ನೂ ಅನೇಕ ಘಟನೆಗಳಲ್ಲಿ ಜನರು ಮೃತಪಟ್ಟಿದ್ದಾರೆ. ಆಗ ರಾಜೀನಾಮೆ ಪಡೆದಿಲ್ಲ. ಈ ಇಬ್ಬಗೆ ನೀತಿ ಕೈಬಿಡಬೇಕು ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''