ಜಿಎಸ್ಟಿ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ

KannadaprabhaNewsNetwork |  
Published : Oct 10, 2025, 01:00 AM IST
ಮಧುಗಿರಿಯಲ್ಲಿ ಕೇಂದ್ರ ಸರ್ಕಾರ ಜಿಎಸ್‌ಟಿ ಇಳಿಕೆ ಮಾಡಿರುವ ಬಗ್ಗೆ ಗ್ರಾಹಕರ ಹಾಗೂ ವ್ಯಾಪಾರಸ್ಥರ ಅಭಿಪ್ರಾಯ ಸಂಗ್ರಹಕ್ಕೆ ತಾಲೂಕು ಅಧ್ಯಕ್ಷ ಹನುಮಂತರೆಡ್ಡಿ ಚಾಲನೆ ನೀಡಿದರು.ಮಾಜಿ ಅಧ್ಯಕ್ಷ ಕೆ..ಎಸ್‌.ಪಾಂಡುರಂಗಾರೆಡ್ಡಿ ಇತರರು ಇದ್ದಾರೆ.  | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿರುವ ಕುರಿತು ಗ್ರಾಹಕರ ಮತ್ತು ವ್ಯಾಪಾರಸ್ಥರ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಹಾಗೂ ವಕೀಲ ಹನುಮಂತರೆಡ್ಡಿ ಗುರುವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿರುವ ಕುರಿತು ಗ್ರಾಹಕರ ಮತ್ತು ವ್ಯಾಪಾರಸ್ಥರ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಹಾಗೂ ವಕೀಲ ಹನುಮಂತರೆಡ್ಡಿ ಗುರುವಾರ ಚಾಲನೆ ನೀಡಿದರು.

ಇಲ್ಲಿನ ಡೂಂ ಲೈಟ್‌ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಮಾವೇಶಗೊಂಡು ಜಿಎಸ್‌ಟಿ ದರ ಇಳಿಕೆ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ ಪತ್ರಗಳನ್ನು ಕೈಯಲ್ಲಿ ಹಿಡಿದು ವ್ಯಾಪಾರಸ್ಥರು ಮತ್ತು ಗ್ರಾಹಕರಿಗೆ ಅರಿವು ಮೂಡಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ಶೇ.18ರಷ್ಠಿದ್ದ ಜಿಎಸ್‌ಟಿಯನ್ನು ಶೇ. 5ಕ್ಕೆ ಇಳಿಸಿರುವ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಿ ಜನಸಾಮಾನ್ಯರ ಜೀವನ ನಿರ್ವಹಣೆಗೆ ಅನುಕೂಲವಾಗಿದೆ. ಇದನ್ನು ತಾಲೂಕಿನ ಪ್ರತಿ ಗ್ರಾಮಗಳಿಗೆ ತೆರಳಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.

ಮಾಜಿ ಅಧ್ಯಕ್ಷ ಕೆ.ಎಸ್‌.ಪಾಂಡುರಂಗಾರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಜಿಎಸ್‌ಟಿಯನ್ನು ಇಳಿಸಿದ್ದು, ರಾಜ್ಯ ಸರ್ಕಾರ ನಾವು ಮಾಡಿದ್ದೇವೆಂದು ಹೇಳಿಕೊಳ್ಳುತ್ತಿರುವುದು ಹಾಸ್ಯಸ್ಪದ ಎಂದ ಅ‍ವರು,ಈ ಜಿಎಸ್ಟಿ ಪರಿಷ್ಕರಣೆ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.

ಬಿಜೆಪಿ ಮುಖಂಡ ರಮೇಶ್ ಮಾತನಾಡಿ, ಭಾರತ ದೇಶದ ಜನತೆಯ ಸ್ವದೇಶಿ ವಸ್ತುಗಳನ್ನು ಬಳಸುವಂತೆ ಕರೆ ನೀಡಿದರು.

ಈ ವೇಳೆ ಬಿಜೆಪಿ ಹಿರಿಯ ಮುಖಂಡ ಬಡವನಹಳ್ಳಿ ನಾಗರಾಜಪ್ಪ,ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು