ಕನ್ನಡಪ್ರಭ ವಾರ್ತೆ ಅರಸೀಕೆರೆ
ಬಿಜೆಪಿ ಆಡಳಿತದ ಅವಧಿಯಲ್ಲಿ ಇವರಿಗೆ ‘ಸದನ ಶೂರ’ ಪ್ರಶಸ್ತಿ ನೀಡಲಾಗಿತ್ತು. ಆದರೆ ಇಂದಿನ ಅವರ ವರ್ತನೆ ನೋಡಿದರೆ ಅವರು ಸದನ ಶೂರರಲ್ಲ, ಸದನ ಕ್ರೂರರು ಎನ್ನುವುದು ಸ್ಪಷ್ಟವಾಗಿದೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ಹೈಕಮಾಂಡನ್ನು ಓಲೈಸಿ ಸಚಿವ ಸ್ಥಾನ ಪಡೆಯುವ ಉದ್ದೇಶದಿಂದಲೇ ಇಂತಹ ಅತಿರೇಕದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.ಶಾಸಕರು ಈ ರೀತಿ ಮಾತನಾಡುವ ಸಂದರ್ಭದಲ್ಲಿ ಸದನಾಧ್ಯಕ್ಷರು ತಕ್ಷಣವೇ ಕಡಿವಾಣ ಹಾಕಬೇಕಾಗಿತ್ತು. ಆದರೆ ಸ್ಪೀಕರ್ ಅವರ ವರ್ತನೆ ಪರೋಕ್ಷ ಬೆಂಬಲ ನೀಡಿದಂತೆ ಕಂಡಿತು. ಆರ್ಎಸ್ಎಸ್ ಅನ್ನು ದೂಷಿಸಿದರೆ ಅವರಿಗೆ ಏನೋ ಲಾಭ ಸಿಗುವಂತೆ ಕಾಣುತ್ತಿದೆ ಎಂದು ಆರೋಪಿಸಿದರು. ಶಿವಲಿಂಗೇಗೌಡರ ಪಾಪದ ಕೊಡ ತುಂಬಿ ತುಳುಕಿದ್ದು, ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಅವರು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಯತೀಶ್ ಮಾತನಾಡಿ, ಶಾಸಕ ಶಿವಲಿಂಗೇಗೌಡರು ಪ್ರತಿಯೊಂದು ಅಧಿವೇಶನದಲ್ಲೂ ಅಹಂಕಾರಪೂರ್ಣ ಭಾಷೆ ಬಳಸುವುದು ನಿಲ್ಲಿಸಬೇಕು. ಹಳ್ಳಿಯಲ್ಲಿ ಬೆಳೆದಿದ್ದೇವೆ ಎಂದು ಹೇಳಿಕೊಂಡು ರೈತರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ರೈತರು ಯಾವತ್ತೂ ಅಸಂಸ್ಕೃತವಾಗಿ ಮಾತನಾಡುವುದಿಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ರೈತರ ಹೆಸರನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಇವರ ರಾಜಕೀಯ ಉದ್ದೇಶ ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ದೂಷಿಸುವುದಷ್ಟೇ ಆಗಿದೆ. ಜೊತೆಗೆ ನಿರ್ದಿಷ್ಟ ಸಮುದಾಯದ ಓಲೈಕೆಯ ರಾಜಕಾರಣ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇತಿಹಾಸವನ್ನು ಅರಿತುಕೊಂಡು ಮಾತನಾಡಬೇಕು. ಅಭಿವೃದ್ಧಿ ವಿಚಾರಗಳ ಬಗ್ಗೆ ಚಿಂತನೆ ಮಾಡಬೇಕಿದೆ ಎಂದು ಹೇಳಿದರು. ಆರ್ಎಸ್ಎಸ್ ಹಾಗೂ ಬಿಜೆಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಬೃಹತ್ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿರಿಯ ಮುಖಂಡ ದುಮ್ಮೇನಹಳ್ಳಿ ಗಂಗಾಧರ್, ನಗರ ಮಂಡಲದ ಅಧ್ಯಕ್ಷ ಅವಿನಾಶ್ ನಾಯ್ಡು, ಬಾಣಾವರ ಜಯಣ್ಣ, ನಗರ ಮಂಡಲದ ಮಾಜಿ ಅಧ್ಯಕ್ಷ ಪುರುಷೋತ್ತಮ್, ಗ್ರಾಮೀಣ ಮಂಡಲದ ಮಾಜಿ ಅಧ್ಯಕ್ಷ ರಮೇಶ್, ಶಿಲ್ಪಾ ಸತೀಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.