ಪಿಟಿಐ ಮುಂಬೈ
ಮಹಿಳಾ ಮತದಾರರನ್ನು ಸೆಳೆಯಲು ಅವರಿಗೆ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತದ ಹಣ ನೀಡುವ ‘ಲಡ್ಕಿ ಬೆಹೆನ್’ ಯೋಜನೆ ಮಹಾಯುತಿ ಮೈತ್ರಿಕೂಟದ ಪರವಾಗಿ ಜಾದೂ ಮಾಡಿದ ಪರಿಣಾಮ ಈ ಮಟ್ಟದ ಜಯ ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಈ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಮಹಾರಾಷ್ಟ್ರದ ಚುನಾವಣಾ ಇತಿಹಾಸದಲ್ಲೇ ಆ ಪಕ್ಷ ತೋರಿದ ಅತ್ಯುತ್ತಮ ಪ್ರದರ್ಶನವಾಗಿದೆ. ಇದೇ ವೇಳೆ, ಕಾಂಗ್ರೆಸ್ನ ಪ್ರದರ್ಶನವು ಮಹಾರಾಷ್ಟ್ರ ಕಾಂಗ್ರೆಸ್ನ ಇತಿಹಾಸದಲ್ಲೇ ಆ ಪಕ್ಷ ಅತ್ಯಂತ ಕಳಪೆ ಪ್ರದರ್ಶನಗಳಲ್ಲಿ ಒಂದಾಗಿದೆ.ಮಹಾಯುತಿ ಮೈತ್ರಿಕೂಟದ ಎದುರು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ ಅಘಾಡಿ ಮೈತ್ರಿಕೂಟ (ಕಾಂಗ್ರೆಸ್ + ಶಿವಸೇನೆ (ಉದ್ಧವ್ ಬಣ) + ಎನ್ಸಿಪಿ (ಶರದ್ ಪವಾರ್ ಬಣ) ಹೀನಾಯ ಸೋಲು ಕಂಡಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದು, ರಾಹುಲ್ ಗಾಂಧಿ ದೊಡ್ಡ ಮುಖಭಂಗ ಅನುಭವಿಸಿದ್ದಾರೆ.
ಅಚ್ಚರಿಯ ಸಂಗತಿಯೆಂದರೆ, ಈ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಿದ್ದ 149 ಸೀಟುಗಳಲ್ಲಿ ಸುಮಾರು ಶೇ.86ರಷ್ಟು ಸೀಟುಗಳನ್ನು ಗೆದ್ದಿದೆ. ಬಿಜೆಪಿಯ ಸೀಟು ಗಳಿಕೆಯು ಮಹಾಯುತಿ ಮೈತ್ರಿಕೂಟದ ಇನ್ನೆರಡು ಪಕ್ಷಗಳಾದ ಶಿವಸೇನೆ ಮತ್ತು ಎನ್ಸಿಪಿ ಗೆದ್ದ ಒಟ್ಟು ಸೀಟುಗಳಿಗಿಂತ ಹೆಚ್ಚಿದೆ. ಅಲ್ಲದೆ, ಬಿಜೆಪಿ ಗೆದ್ದ ಕ್ಷೇತ್ರಗಳ ಸಂಖ್ಯೆ ಪ್ರತಿಪಕ್ಷದ ಮಹಾವಿಕಾಸ ಅಘಾಡಿಯ ಮೂರೂ ಪಕ್ಷಗಳು ಗೆದ್ದ ಕ್ಷೇತ್ರಗಳ ದುಪ್ಪಟ್ಟಿಗಿಂತ ಜಾಸ್ತಿಯಿದೆ.
ಮಹಾಯುತಿ ಮೈತ್ರಿಯ ಪ್ರಮುಖ ನಾಯಕರಾದ ಬಿಜೆಪಿಯ ದೇವೇಂದ್ರ ಫಡ್ನವೀಸ್, ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಎನ್ಸಿಪಿಯ ಅಜಿತ್ ಪವಾರ್ ತಮ್ಮತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಮತಗಳೊಂದಿಗೆ ಜಯ ಗಳಿಸಿದ್ದಾರೆ.
ಬಿಜೆಪಿಯು ಭರ್ಜರಿ ಜಯದೊಂದಿಗೆ ಐದು ವರ್ಷಗಳ ಬಳಿಕ ಮತ್ತೆ ತನ್ನ ಮುಖ್ಯಮಂತ್ರಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಸಜ್ಜಾಗಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 105 ಸೀಟುಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಚುನಾವಣೆಪೂರ್ವ ಮೈತ್ರಿಪಕ್ಷವಾಗಿದ್ದ ಶಿವಸೇನೆಯು ಎನ್ಡಿಎ ತೊರೆದು ವಿಪಕ್ಷಗಳ ಜೊತೆಗೆ ಮಹಾವಿಕಾಸ ಅಘಾಡಿ ಮೈತ್ರಿಕೂಟ ರಚಿಸಿ ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸರ್ಕಾರ ರಚಿಸಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಸಾಧ್ಯವಾಗಿರಲಿಲ್ಲ. ನಂತರ ಶಿವಸೇನೆಯನ್ನು ಒಡೆದು ಏಕನಾಥ್ ಶಿಂಧೆ 2022ರಲ್ಲಿ ಸರ್ಕಾರ ಬೀಳಿಸಿ ಬಿಜೆಪಿ ಜೊತೆ ಕೈಜೋಡಿಸಿ ತಾವೇ ಮುಖ್ಯಮಂತ್ರಿಯಾಗಿದ್ದರು. ಈಗ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದಿರುವುದರಿಂದ ಮುಖ್ಯಮಂತ್ರಿ ಹುದ್ದೆಯನ್ನು ತಾನೇ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.
2. ಹಿಂದುತ್ವವಾದಿ ಘೋಷಣೆಗಳು
4. ಮರಾಠ ಮತದಾರರ ಓಲೈಕೆ
7. ರೈತರೂ ಬಿಜೆಪಿ ಪರ ನಿಂತರು
ಮಹಾರಾಷ್ಟ್ರದ ಶೇ.65ರಷ್ಟು ಜನಸಂಖ್ಯೆ ಕೃಷಿ ಮೇಲೆ ಅವಲಂಬಿತ. ಆದರೆ ಸೋಯಾಬೀನ್ ಹಾಗೂ ಹತ್ತಿಗೆ ಬೆಂಬಲ ಬೆಲೆ ನೀಡುವ ವಿಚಾರ ಪ್ರಮುಖ ಕೃಷಿ ಸಮಸ್ಯೆಯಾಗಿತ್ತು. ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಹೊಡೆತ ನೀಡಲು ಇದೂ ಪ್ರಮುಖ ಕಾರಣ ಎನ್ನಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಕಳೆದ ಬಜೆಟ್ನಲ್ಲಿ ರೈತರಿಗೆ ಉಚಿತ ವಿದ್ಯುತ್, ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆಯ ವ್ಯತ್ಯಾಸ ಮೊತ್ತ ನೀಡುವ ಭರವಸೆ ನೀಡಿದ್ದು ವರದಾನವಾಯಿತು.