- ವಾಲ್ಮೀಕಿ, ಮುಡಾ ಹಗರಣದ ತನಿಖೆಗೆ ಸಿಎಂ ಕ್ರಮ ಕೈಗೊಂಡಿದ್ದಾರೆ: ಗೃಹ ಸಚಿವ ಹೇಳಿಕೆ - - -
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹಿಂದೆ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ನಿಜಾಂಶ ಇತ್ತು. ರಾಜ್ಯದ ಸಂಪತ್ತನ್ನು ಉಳಿಸುವ ಸದುದ್ದೇಶದಿಂದ ಕೈಗೊಂಡಿದ್ದ ಪಾದಯಾತ್ರೆ ಅದಾಗಿತ್ತು. ಆದರೆ, ಇಂದು ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪ ಹೊರಿಸಿ, ಪಾದಯಾತ್ರೆ ನಡೆಸಲು ಬಿಜೆಪಿಯವರು ಹೊರಟಿದ್ದಾರೆ ಎಂದರು.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ವಿನಾಕಾರಣ ಆರೋಪ ಮಾಡುತ್ತಿವೆ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಕಾನೂನುಬಾಹಿರ ಕೆಲಸವನ್ನೂ ನಡೆಸಿಲ್ಲ. ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದರು.ಯಾವುದೇ ರೀತಿಯ ಕಾನೂನುಬಾಹಿರ ಕೆಲಸ ನಡಯದೇ ಇರುವ ಪ್ರಕರಣದ ಬಗ್ಗೆ ಪಾದಯಾತ್ರೆ ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತಿ, ತಪ್ಪು ಸಂದೇಶ ನೀಡಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ನಾವು ರಾಜ್ಯದ ಜನತೆಗೆ ಬಿಜೆಪಿಯವರ ಪಾದಯಾತ್ರೆಯ ದುರುದ್ದೇಶ ಮತ್ತು ಹಿಂದಿನ ನಮ್ಮ ಪಾದಯಾತ್ರೆಯ ಸದುದ್ದೇಶದ ವ್ಯತ್ಯಾಸವನ್ನು ತಿಳಿಸುವ ಕೆಲಸವನ್ನು ಮಾಡುತ್ತೇವೆ. ತಪ್ಪಿಲ್ಲದ ಕಾರಣಕ್ಕೆ ಧೈರ್ಯದಿಂದಲೇ ವಾಲ್ಮೀಕಿ ಹಗರಣ ಮತ್ತು ಮುಡಾ ಬಗ್ಗೆ ಸರಿಯಾದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ಸಮಿತಿ ವರದಿ ಬಂದ ನಂತರ ಜನರಿಗೆ ಸತ್ಯ ತಿಳಿಯುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯೂ ಆಗುತ್ತದೆ ಎಂದು ಗೃಹ ಸಚಿವರು ಹೇಳಿದರು.
ಅಲ್ಲದೇ, ವಾಲ್ಮೀಕಿ ನಿಗಮದ ಹಗರಣ ಕುರಿತಂತೆ ತನಿಖೆ ಮುಗಿಯುವವರೆಗೆ ಯಾರೂ ಊಹಾಪೋಹಗಳನ್ನು ನಂಬುವುದು ಬೇಡ. ಸಚಿವರ ಖಾತೆಗೆ ಹಣ ಹೋಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾರ ಬಗ್ಗೆಯೂ, ಯಾವುದೇ ಮುಲಾಜೇನೂ ಇಲ್ಲ. ಎಲ್ಲ ವಿಚಾರಗಳ ಕುರಿತಂತೆಯೂ ತನಿಖೆ ಮಾಡುತ್ತೇವೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಪೃಥ್ವಿ ಹೆಸರಿನ ಯುವಕ ನ್ಯಾಯ ಸಿಗದಿದ್ದರೆ ಭಯೋತ್ಪಾದಕನಾಗಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿರುವ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಲಾಗುವುದು. ಇಂತಹ ಆರೋಪಗಳು ಬಂದಾಗ ಯಾವುದೇ ಪೊಲೀಸ್ ಠಾಣೆಯಲ್ಲಿ ಅನಾವಶ್ಯಕ ತೊಂದರೆ ಮಾಡಿದ್ದರೆ ಇಲಾಖೆ ತನಿಖೆ ನಡೆಸುತ್ತದೆ. ಪೊಲೀಸರದ್ದೇ ತಪ್ಪಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದೂ ಖಚಿತ ಎಂದು ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದರು.
ಬಾಕ್ಸ್-2* ನಾಯಿ ಮಾಂಸ ಅಲ್ಲ, ಮೇಕೆ ಮಾಂಸ - ದುರುದ್ದೇಶದಿಂದ ಗಲಾಟೆ ಮಾಡಿದರೆ ಸುಮ್ಮನೆ ಕೂರಲ್ಲ: ಸಚಿವ
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಹೋಗಿ ಅದು ನಾಯಿ ಮಾಂಸ ಅಂತಾ ಹೇಳಿ, ಅನಾವಶ್ಯಕವಾಗಿ ಆರೋಪ ಮಾಡಿ, ಗಲಾಟೆ ಮಾಡಿದ್ದಾರೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯವರು ಮಾಂಸವನ್ನು ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ವರದಿ ಸಹ ಬಂದಿದ್ದು, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸವೆಂಬುದಾಗಿ ವರದಿಯಲ್ಲಿದೆ ಎಂದು ತಿಳಿದುಬಂದಿದೆ ಎಂದರು.
ತಡವಾಗಾದ್ರೂ ಮಂಜೂರು:
- - -
(ಫೋಟೋ: ಪರಮೇಶ್ವರ, ಸಚಿವ)