ಶಿವಮೊಗ್ಗ: ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ಸೋಮವಾರ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹರಡುತ್ತಿರುವ ಡೆಂಘೀ, ಚಿಕೂನ್ ಗುನ್ಯಾ, ಜಿಕಾ ವೈರಸ್ ಜ್ವರದ ಬಗ್ಗೆ ಮಾಹಿತಿ ಪಡೆಯಲಾಯಿತು.
ಮೆಗ್ಗಾನ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ಗೆ ಭೇಟಿ ನೀಡಿ ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಅವಶ್ಯಕತೆ ಇರುವ ವೈಟ್ ಪ್ಲೇಟಿಲೆಟ್ಸ್ ಸಂಗ್ರಹದ ಬಗ್ಗೆ ಮಾಹಿತಿ ಪಡೆಯಲಾಯಿತು. ಇದೇ ಸಂದರ್ಭ ಆಸ್ಪತ್ರೆ ಲ್ಯಾಬ್ಗೂ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡುವ ಕಿಟ್ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆಯಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕರಾದ ಎಸ್.ದತ್ತಾತ್ರಿ, ವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ಡಾ.ಸುರೇಶ್, ವೈದ್ಯಕೀಯ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಡಾ.ಹೇಮಂತ್ ಕುಮಾರ್, ಪ್ರಕೋಷ್ಟಗಳ ಜಿಲ್ಲಾ ಸಂಯೋಜಕ ಹೃಷಿಕೇಶ್ ಪೈ, ಪ್ರಕೋಷ್ಟಗಳ ಜಿಲ್ಲಾ ಸಹ ಸಂಯೋಜಕರಾದ ಡಾ. ಶ್ರೀನಿವಾಸ್ ರೆಡ್ಡಿ , ಡಾ. ಮರುಳಾರಾಧ್ಯ, ಡಾ. ಗೌತಮ್ , ಡಾ. ಸಂತೋಷ್ , ಹಾಗೂ ಮುರಳೀಧರ್ ರವರು ಉಪಸ್ಥಿತರಿದ್ದರು.