ಬಿಜೆಪಿ ಬಜೆಟ್‌ ಪ್ರತಿ ಓದಲ್ಲ, ಅಭಿವೃದ್ಧಿ ಶೂನ್ಯ ಅಂತಾರೆ: ಸಿದ್ದರಾಮಯ್ಯ

KannadaprabhaNewsNetwork |  
Published : May 22, 2024, 12:49 AM IST
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಿಎಂ ಸಿದ್ದರಾಮಯ್ಯ. | Kannada Prabha

ಸಾರಾಂಶ

ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಭರವಸೆ ನೀಡಿದ್ದೆವು, ಯಾವೆಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸಿದ್ದೇವೆ. ಆದರೂ ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವೂ ಹೇಳ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಬಿಜೆಪಿಯವರು ಬಜೆಟ್‌ ಪ್ರತಿಯನ್ನು ಓದಲ್ಲ, ಅಭಿವೃದ್ಧಿ ಶೂನ್ಯ ಅಂತ ಏನೇನೋ ಹೇಳ್ತಾರೆ. ಬಿಜೆಪಿಯವರು ಸುಳ್ಳು ಹೇಳಿದರೆ, ನೀವೂ ಹಾಗೇ ಹೇಳ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಭರವಸೆ ನೀಡಿದ್ದೆವು, ಯಾವೆಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸಿದ್ದೇವೆ. ಆದರೂ ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವೂ ಹೇಳ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಹಿಂದಿನ ವರ್ಷ ನೀರಾವರಿಗಾಗಿ 16 ಸಾವಿರ ಕೋಟಿ ರು. ಮೀಸಲಿರಿಸಲಾಗಿತ್ತು. ಈ ವರ್ಷ 18 ಸಾವಿರ ಕೋಟಿ ರು. ಬಜೆಟ್‌ನಲ್ಲಿ ಇಟ್ಟಿದ್ದೇವೆ. ಇದು ಹೆಚ್ಚೋ, ಕಡಿಮೆಯೋ? ಏನೂ ಮಾಡಿಲ್ಲ ಅಂತ ಅಂದ್ರೆ ಏನು ಹೇಳಬೇಕು ಎಂದರು.

ಈ ವರ್ಷ ಗ್ಯಾರಂಟಿ ಯೋಜನೆಗಳು ಸೇರಿ 1. 20 ಲಕ್ಷ ಕೋಟಿ ರು. ಬಜೆಟ್ ಕೊಟ್ಟಿದ್ದೇವೆ. ಬಿಜೆಪಿಯವರು ಬಜೆಟ್ ಪ್ರತಿಯನ್ನೇ ಓದಲ್ಲ. ಅವರಿಗೆ ಎಕನಾಮಿಕ್ಸೇ ಗೊತ್ತಾಗಲ್ಲ. ಸುಮ್ಮನೆ ಅಭಿವೃದ್ಧಿ ಶೂನ್ಯ ಅಂತ ಏನೇನೋ ಹೇಳ್ತಾರೆ ಎಂದು ಸಿಎಂ ಟೀಕಿಸಿದರು.

ಬಡವರಿಗೆ ಆರ್ಥಿಕ ಸಬಲತೆ ನೀಡೋದು ಅಭಿವೃದ್ಧಿ ಅಲ್ವಾ ಎಂದು ತಿರುಗೇಟು ನೀಡಿದ ಅವರು, ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಮಾತ್ರ ಸಾಲದು, ಆರ್ಥಿಕ- ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಡಾ.ಬಿ.ಆರ್‌. ಅಂಬೇಡ್ಕರ್‌ ಹೇಳಿದ್ದರು. ಇದು ಗೊತ್ತಿದೆಯಾ ಅವರಿಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ, ಮುಖಂಡರಾದ ರಕ್ಷಿತ್‌ ಶಿವರಾಮ್‌, ಐವನ್ ಡಿಸೋಜ, ಶಾಹುಲ್ ಹಮೀದ್‌, ಟಿ.ಎಂ. ಶಹೀದ್‌ ಮತ್ತಿತರರು ಇದ್ದರು.

ಬಳಿಕ ಸಿದ್ದರಾಮಯ್ಯ ಅವರು ರಸ್ತೆ ಮಾರ್ಗವಾಗಿ ಬೆಳ್ತಂಗಡಿಯ ಗುರುವಾಯನಕೆರೆಗೆ ತೆರಳಿ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ