ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಆರಂಭಗೊಳ್ಳುವ ಸಮಾವೇಶದಲ್ಲಿ ಮೋರ್ಚಾದ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ, ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಎಂ.ಡಿ. ಲಕ್ಷ್ಮೀನಾರಾಯಣ ಇತರರು ಭಾಗವಹಿಸುವರು ಎಂದರು.
ಅಧಿಕಾರಕ್ಕೆ ಬರುವ ಮುನ್ನ ಸಿದ್ದರಾಮಯ್ಯ ಅಹಿಂದ ಮಂತ್ರ ಜಪ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಯಾದ ನಂತರ ಹಿಂದ ಎಂಬುದನ್ನೇ ಹಿಂದಕ್ಕೆ ತಳ್ಳಿ, ಹಿಂದುಳಿದವರು, ದಲಿತರನ್ನು ಬಿಟ್ಟು, ಅಲ್ಪಸಂಖ್ಯಾತರನ್ನು ಹೊತ್ತು ಮೆರೆಯುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗದವರಾಗಿದ್ದು, ಇಡೀ ದೇಶವನ್ನು ಮುನ್ನಡೆಸುತ್ತಿದ್ದಾರೆ. ಮೋದಿಯಂತಹ ನಾಯಕರ ಜೊತೆಗೆ ಹಿಂದುಳಿದ ವರ್ಗ ಇದೆಯೆಂಬ ಸಂದೇಶ ಸಾರಲು ಸಮಾವೇಶ ಆಯೋಜಿಸಿದೆ ಎಂದು ಅವರು ಹೇಳಿದರು.ರೈತ ಮೋರ್ಚಾ ಮುುಖಂಡ ಬಿ.ಎಂ.ಸತೀಶ ಕೊಳೇನಹಳ್ಳಿ ಮಾತನಾಡಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಯೋಜನೆ, ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಈವರೆಗೆ ಹಿಂದುಳಿದ ವರ್ಗಗಳು ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಯಾವುದೇ ಕಾರ್ಯಕ್ರಮ ಜಾರಿಗೊಳಿಸಿಲ್ಲ. ಮತಗಳಿಗಾಗಿ ಬರೀ ಓಲೈಕೆ ಮಾಡುತ್ತಿದೆ. ಕಾಂಗ್ರೆಸ್ಸಿನಿಂದ ಹಿಂದುಳಿದ ವರ್ಗಗಳು ತೀವ್ರ ಬೇಸತ್ತಿದ್ದಾರೆ ಎಂದು ದೂರಿದರು.
ದೂಡಾ ಮಾಜಿ ಅಧ್ಯಕ್ಷ, ಉಪ್ಪಾರ ಸಮಾಜದ ಮುಖಂಡ ಎ.ವೈ.ಪ್ರಕಾಶ ಮಾತನಾಡಿ, ಹಿಂದುಳಿದ ವರ್ಗಗಳವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಧಿಕಾರ ದೊರೆಯುವುದಿಲ್ಲ. ನಾವೇನಾದರೂ ಬಿಜೆಪಿಯಲ್ಲಿ ಇಲ್ಲದೇ ಇದ್ದಿದ್ದರೆ ನಾನಾಗಲೀ ಅಥವಾ ರಾಜನಹಳ್ಳಿ ಶಿವಕುಮಾರ ಆಗಲಿ ದಡಾ ಅಧ್ಯಕ್ಷರಾಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅವಕಾಶ, ಅಧಿಕಾರವಂತೂ ಹಿಂದುಳಿದ ವರ್ಗದವರಿಗೆ ಸಿಗುವುದಿಲ್ಲ. ಹಿಂದುಳಿದ ವರ್ಗದವರು ಕಾಂಗ್ರೆಸ್ಸನ್ನು ಬಿಟ್ಟು, ಬಿಜೆಪಿಗೆ ಸೇರ್ಪಡೆ ಯಾಗಬೇಕು ಎಂದು ಕರೆ ನೀಡಿದರು.