ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ 86 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಹೇಳಿರುವುದು ಬೇಜವಾಬ್ದಾರಿತನದ ಪರಮಾವಧಿ. ರಾಜ್ಯದಲ್ಲಿ ಇನ್ನೂ ನೋಟಿಫಿಕೇಷನ್ ಆಗಿಲ್ಲ. ಮ್ಯಾಪಿಂಗ್ ಮಾಡುವ ಕೆಲಸ ನಡೆಯುತ್ತಿದೆ. ಆಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದರು.
ಇಂತಹ ರಾಷ್ಟ್ರ ದ್ರೋಹದ ಕೆಲಸ ಮಾಡುತ್ತಿರುವ ಕೆಪಿಸಿಸಿ ವಕ್ತಾರನನ್ನು ಕೂಡಲೇ ಬಂಧಿಸಬೇಕು. ಆತನ ವಿರುದ್ದ ರಾಜ್ಯ ಗೃಹ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ಕೂಡ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಮುಂದಾಗಿರುವ ಅವರ ವಿರುದ್ಧ ಬಿಜೆಪಿ ವತಿಯಿಂದ ಅಧಿಕೃತವಾಗಿ ದೂರು ನೀಡುತ್ತೇವೆ ಎಂದು ಅವರು ಹೇಳಿದರು.ಸ್ಥಾಪಿತ ಹಿತಾಸಕ್ತಿಗಳ ಕೈವಾಡ
ಇಂಧನ ಬಳಕೆ ಮಿತವ್ಯಯ, ಚಿನ್ನ ಖರೀದಿ ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ನೀಡಿರುವ ಸಂದೇಶ ಕುರಿತು ಪ್ರತಿ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಇಂಧನ ಮತ್ತು ಚಿನ್ನದ ಅತಿಯಾದ ಆಮದಿನಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ. ಇದನ್ನು ತಪ್ಪಿಸುವ ಸಲುವಾಗಿ ಪ್ರಧಾನಿ ಮೋದಿ ದೇಶದ ಜನರಿಗೆ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದರು.