ಶಾಸಕರ ಭಾವಚಿತ್ರ ಅಳವಡಿಕೆಗೆ ಬಿಜೆಪಿ ವಿರೋಧ

KannadaprabhaNewsNetwork |  
Published : Aug 15, 2025, 01:00 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ನಗರಸಭೆ ಸದಸ್ಯ ಪ್ರಕಾಶ ಪೂಜಾರ ಮಾತನಾಡಿ, ಯುದ್ಧ ಟ್ಯಾಂಕರ್ ಅಳವಡಿಕೆಗೆ ನಗರಸಭೆಯಲ್ಲಿ ಜರುಗಿದ ಸಭೆಯಲ್ಲಿ ಸರ್ವ ಸದಸ್ಯರ ಸರ್ವನಾಮತದಿಂದ ಠರಾವು ಅಂಗೀಕರಿಸಲಾಗಿತ್ತು. ಯುದ್ಧ ಟ್ಯಾಂಕರ್‌ಗೆ ಶಾಸಕರ ಅನುದಾನದಿಂದ ಹಣ ಬಿಡುಗಡೆಯಾಗಿದ್ದರಿಂದ ಅವರು ತಮ್ಮ ಹೆಸರು ಹಾಕಿಕೊಳ್ಳಲಿ. ಅದನ್ನು ಬಿಟ್ಟು ಪಿಕೆಕೆ ಸಂಸ್ಥೆ ಹೆಸರು ಹಾಕಿರುವುದು ಖಂಡನೀಯವಾಗಿದೆ ಎಂದರು.

ರಾಣಿಬೆನ್ನೂರು: ಯುದ್ಧ ಟ್ಯಾಂಕರ್ ಅಳವಡಿಕೆಗಲ್ಲ, ಅದರ ಮೇಲೆ ಶಾಸಕರ ಭಾವಚಿತ್ರ ಹಾಕಲು ಮಾತ್ರ ನಮ್ಮ ವಿರೋಧವಿದೆ ಎಂದು ಬಿಜೆಪಿ ಶಹರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ ತಿಳಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ತಹಸೀಲ್ದಾರ್ ಕಚೇರಿ ಬಳಿ ಆ. 15ರಂದು ಪ್ರತಿಷ್ಠಾಪಿಸಲಿರುವ ಪಾಕಿಸ್ತಾನದೊಂದಿಗಿನ ಯುದ್ಧದಲ್ಲಿ ಬಳಸಿದ ಟ್ಯಾಂಕರ್‌ಗೆ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ ಎಂದು ಶಾಸಕ ಪ್ರಕಾಶ ಕೋಳಿವಾಡ ಸದನದಲ್ಲಿ ಹೇಳಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು, ನಮ್ಮ ಪಕ್ಷ ಸದಾ ದೇಶದ ಸೈನಿಕರು ಮತ್ತು ಸೈನ್ಯದ ಪರವಾಗಿದೆ. ನಾವು ಯಾರು ಕೂಡ ಅಲ್ಲಿ ಪ್ರತಿಭಟನೆ ಮಾಡಿಲ್ಲ. ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಪಕ್ಷದ ವತಿಯಿಂದ ದೂರು ನೀಡಿದ್ದೇವೆ ಎಂದರು. ನಗರಸಭೆ ಸದಸ್ಯ ಪ್ರಕಾಶ ಪೂಜಾರ ಮಾತನಾಡಿ, ಯುದ್ಧ ಟ್ಯಾಂಕರ್ ಅಳವಡಿಕೆಗೆ ನಗರಸಭೆಯಲ್ಲಿ ಜರುಗಿದ ಸಭೆಯಲ್ಲಿ ಸರ್ವ ಸದಸ್ಯರ ಸರ್ವನಾಮತದಿಂದ ಠರಾವು ಅಂಗೀಕರಿಸಲಾಗಿತ್ತು. ಯುದ್ಧ ಟ್ಯಾಂಕರ್‌ಗೆ ಶಾಸಕರ ಅನುದಾನದಿಂದ ಹಣ ಬಿಡುಗಡೆಯಾಗಿದ್ದರಿಂದ ಅವರು ತಮ್ಮ ಹೆಸರು ಹಾಕಿಕೊಳ್ಳಲಿ. ಅದನ್ನು ಬಿಟ್ಟು ಪಿಕೆಕೆ ಸಂಸ್ಥೆ ಹೆಸರು ಹಾಕಿರುವುದು ಖಂಡನೀಯವಾಗಿದೆ.

ಯುದ್ಧ ಟ್ಯಾಂಕರ್ ಇರಿಸಲು ಕಟ್ಟೆ ನಿರ್ಮಿಸಲು ಈಗಾಗಲೇ ನಗರಸಭೆ ವತಿಯಿಂದ ₹9.95 ಲಕ್ಷ ಹಣವನ್ನು ನಿರ್ಮಿತಿ ಕೇಂದ್ರಕ್ಕೆ ಪಾವತಿಸಲಾಗಿದೆ. ಆದ್ದರಿಂದ ಶಾಸಕರು ಸದನದಲ್ಲಿ ಆಡಿರುವ ಮಾತಿಗೆ ಅಲ್ಲಿಯೇ ಬಿಜೆಪಿ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆಗೆ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು. ನಗರಸಭಾ ಉಪಾಧ್ಯಕ್ಷ ನಾಗರಾಜ ಪವಾರ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಪ್ಪ ಕರಡೆಣ್ಣನವರ, ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ, ನಿಂಗರಾಜ ಕೋಡಿಹಳ್ಳಿ, ಹುಚ್ಚಪ್ಪ ಮೆಡ್ಲೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಿದ್ದಣ್ಣ ಚಿಕ್ಕಬಿದರಿ, ಪರಮೇಶ ಗೂಳಣ್ಣನವರ, ಚೋಳಪ್ಪ ಕಸವಾಳ, ಭಾರತಿ ಜಂಬಗಿ, ಮೈಲಪ್ಪ ಗೋಣಿಬಸಮ್ಮನವರ, ಮಾಳಪ್ಪ ಪೂಜಾರ, ಕುಬೇರ ಕೊಂಡಜ್ಜಿ, ಶ್ರೀನಿವಾಸ ಜಡಮಲಿ ಸುದ್ದಿಗೋಷ್ಠಿಯಲ್ಲಿದ್ದರು.ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಇಂದು

ರಾಣಿಬೆನ್ನೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರಸಭಾ ಕ್ರೀಡಾಂಗಣದಲ್ಲಿ ಆ. 15ರಂದು ಬೆಳಗ್ಗೆ 9ಕ್ಕೆ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸುವರು.ತಹಸೀಲ್ದಾರ್ ಆರ್.ಎಚ್. ಭಾಗವಾನ ಧ್ವಜಾರೋಹಣ ನೆರವೇರಿಸುವರು. ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ, ಉಪಾಧ್ಯಕ್ಷ ನಾಗರಾಜ ಪವಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೋಟಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕರೇಗೌಡ ಬಾಗೂರ, ಟಿಎಪಿಸಿಎಂಎಸ್ ಅಧ್ಯಕ್ಷ ಯಲ್ಲರೆಡ್ಡಿ ರಡ್ಡೇರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ ಕೆಂಚರೆಡ್ಡಿ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ