ಭಟ್ಕಳದಲ್ಲಿ ಡಿ.ಕೆ. ಶಿವಕುಮಾರ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ

KannadaprabhaNewsNetwork |  
Published : Mar 27, 2025, 01:09 AM IST
ಪೊಟೋ ಪೈಲ್ : 26ಬಿಕೆಲ್1 | Kannada Prabha

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ

ಭಟ್ಕಳ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ ಎಂಬ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಇಲ್ಲಿನ ಬಿಜೆಪಿ ಮುಖಂಡರು, ಕಾರ್ಯಕರ್ತರು ಬುಧವಾರ ಬಿಜೆಪಿ ಮಂಡಲದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ವೃತ್ತದಲ್ಲಿ ಡಿ.ಕೆ. ಶಿವಕುಮಾರ ಪ್ರತಿಕೃತಿ ದಹನ ನಡೆಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸುನೀಲ ನಾಯ್ಕ, ಡಾ.ಬಿ.ಆರ್. ಅಂಬೇಡ್ಕರ್ ಬರೆದಿರುವ ಸಂವಿಧಾನದಲ್ಲಿ ಜಾತಿ ಆಧಾರಿತ ಸೌಲಭ್ಯಕ್ಕೆ ಅವಕಾಶ ನೀಡಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ. ಶಿವಕುಮಾರ್ ಅಂಬೇಡ್ಕರ್ ಕೊಟ್ಟ ಸಂವಿಧಾನಕ್ಕೆ ಅಪಚಾರ ಮಾಡುವ ಕೆಲಸ ಮಾಡಿದ್ದಾರೆ. ದೇಶದಲ್ಲಿ ಪ್ರತಿ ಪ್ರಜೆಯೂ ಶಾಂತಿ, ನೆಮ್ಮದಿಯಿಂದ ಬದುಕುವುದಕ್ಕೆ ಕೊಟ್ಟ ಅತ್ಯುತ್ತಮವಾದ ಸಂವಿಧಾನವಾಗಿದೆ. ಅದನ್ನು ಜಾತಿ ಆಧಾರಿತ ಬದಲಾವಣೆ ಮಾಡುವುದರ ಮೂಲಕ ಮುಸ್ಲಿಮರಿಗೆ ಮೀಸಲಾತಿ ಕೊಡಲು ಹೊರಟಿರುವುದು ಖಂಡನೀಯವಾಗಿದೆ. ಜಾತಿ ಆಧಾರಿತವಾಗಿ ಸಂವಿಧಾನವನ್ನು ಬದಲಾವಣೆ ಮಾಡುವ ಕಾಂಗ್ರೆಸ್ ಪಕ್ಷದ ನಿಜವಾದ ಬಣ್ಣ ಬದಲಾಗಿದ್ದು ಇದಕ್ಕೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.ಡಿ.ಕೆ. ಶಿವಕುಮಾರ್ ಹೇಳಿಕೆಯಿಂದ ಎಲ್ಲ ಸಮುದಾಯದವರಿಗೆ ನೋವಾಗಿದೆ. ಅವರನ್ನು ಪಕ್ಷದಿಂದ ತಕ್ಷಣ ಉಚ್ಚಾಟನೆ ಮಾಡಬೇಕು. ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡ ಗೋವಿಂದ ನಾಯ್ಕ ಮಾತನಾಡಿ, ಸಂವಿಧಾನದಲ್ಲಿ ಯಾವುದೇ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಆದರೆ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಡಿ.ಕೆ. ಶಿವಕುಮಾರ್ ಮುಸ್ಲಿಮರಿಗೆ ಶೇ.೪ರ ಮೀಸಲಾತಿ ಕಲ್ಪಿಸಲು ಸಂವಿಧಾನದಲ್ಲಿ ತಿದ್ದುಪಡಿಗೂ ಮುಂದಾಗುವ ಕುರಿತು ನೀಡಿದ ಹೇಳಿಕೆಯು ತೀರಾ ಖಂಡನೀಯವಾಗಿದೆ. ಬಿಜೆಪಿ ರಾಜ್ಯಾದ್ಯಂತ ಈ ಕುರಿತು ಪ್ರತಿಭಟನೆಯನ್ನು ಹಮ್ಮಿಕೊಂಡು ಡಿ.ಕೆ. ಶಿವಕುಮಾರ್ ಅವರನ್ನು ಪಕ್ಷದಿಂದ ಕೈಬಿಡಲು ಒತ್ತಾಯಿಸುತ್ತದೆ. ಅವರ ಹೇಳಿಕೆಯಿಂದ ಸರ್ಕಾರದ ನಿಲುವು ಏನೆಂದು ತಿಳಿಯಬೇಕಾಗಿದೆ. ತಕ್ಷಣ ಅವರನ್ನು ಉಪಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ, ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಈಶ್ವರ ನಾಯ್ಕ, ಜಿಲ್ಲಾ ಕಾಯರ್ಯದರ್ಶಿ ಶ್ರೀಕಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಸುನೀಲ ಕಾಮತ್, ಪ್ರಮುಖರಾದ ದಿನೇಶ ನಾಯ್ಕ, ರಾಜೇಶ ನಾಯ್ಕ, ಭಾಸ್ಕರ ದೈಮನೆ, ಪ್ರಮೋದ ಜೋಷಿ, ವೆಂಕಟೇಶ ನಾಯ್ಕ, ಶ್ರೀನಿವಾಸ ನಾಯ್ಕ, ರಾಘವೇಂದ್ರ ನಾಯ್ಕ, ಕುಮಾರ ಹೆಬಳೆ, ಹಿಂದೂ ಜಾಗರಣ ವೇದಿಕೆಯ ಜಯಂತ ನಾಯ್ಕ, ನಾಗೇಶ ನಾಯ್ಕ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!