ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಕಾಂತ ಪೂಜಾರಿ ಹೆಸರಲ್ಲಿ ಸುಮ್ಮನೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಆತ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದರು.
ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಹಣಕ್ಕಾಗಿ ಹೋರಾಟ ಮಾಡಬೇಕು. ಒಂದು ರೂಪಾಯಿ ಹಣ ಬಂದಿಲ್ಲ. ಮೋದಿ ಸರ್ಕಾರದಿಂದ ನಮಗೆ ಅನ್ಯಾಯ ಆಗಿದೆ. ಇದಕ್ಕಾಗಿ ಬಿಜೆಪಿ ಹೋರಾಟ ಮಾಡಿದರೆ ರಾಜ್ಯಕ್ಕೆ ದುಡ್ಡು ಬಂದು ಜನತೆಗೆ ಅನುಕೂಲವಾದರೂ ಆಗಬಹುದು ಎಂದರು.ಶ್ರೀಕಾಂತ್ ಪೂಜಾರಿ ರೌಡಿಶೀಟರ್, ಆತನ ಮೇಲಿರುವ ರೌಡಿಶೀಟರ್ ಪಟ್ಟಕ್ಕೆ ಮುಕ್ತಿ ಕೊಟ್ಟಿರುವುದೇ ಕಾಂಗ್ರೆಸ್. ಆದರೆ, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅದನ್ನೇ ದೊಡ್ಡದು ಮಾಡಿಕೊಂಡು ಬಿಜೆಪಿ ಹೋರಾಟ ಮಾಡುತ್ತಿದೆ ಅಷ್ಟೇ ಎಂದರು.
ಎಂಪಿ ಟಿಕೆಟ್ ಸಚಿವ ಸಂತೋಷ ಲಾಡ್ಗೆ ಕೊಡಲಾಗುತ್ತಿದೆಯಂತೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಬಗ್ಗೆ ಸುರ್ಜೆವಾಲಾ ಬಂದು ಚರ್ಚೆ ಮಾಡುತ್ತಾರೆ. ಯಾರಿಗೆ ಟಿಕೆಟ್ ಕೊಡಬೇಕೆನ್ನುವುದನ್ನು ಆಮೇಲೆ ತೀರ್ಮಾನವಾಗುತ್ತದೆ ಎಂದರು.
ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ. ಆದರೆ ಜನ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.