ದ.ಕ.ದಲ್ಲಿ 61 ಸಾರ್ವಜನಿಕ ಸಭೆಗೆ ಸಿದ್ಧತೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

KannadaprabhaNewsNetwork |  
Published : Apr 17, 2024, 01:17 AM ISTUpdated : Apr 17, 2024, 01:18 AM IST
ಸತೀಶ್‌ ಕುಂಪಲ  | Kannada Prabha

ಸಾರಾಂಶ

ಧಾನಿ ಅವರು ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಾರಾಯಣಗುರು ಪ್ರತಿಮೆಯನ್ನು ಇಡೀ ವಿಶ್ವದ ಜನತೆ ನೋಡುವಂತಾಯಿತು. ಇಡೀ ರೋಡ್‌ಶೋ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರ ಪರ ಮೊದಲ ಹಂತದ ಚುನಾವಣಾ ಪ್ರಚಾರ ಮುಕ್ತಾಯಗೊಂಡಿದೆ. ಮಂಗಳವಾರದಿಂದಲೇ ಎರಡನೇ ಸುತ್ತಿನ ಪ್ರಚಾರ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಾದ್ಯಂತ ಒಟ್ಟು 61 ಸಾರ್ವಜನಿಕ ಸಭೆ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ತಿಳಿಸಿದ್ದಾರೆ.

ಮಂಗಳವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದನೇ ಹಂತದಲ್ಲಿ 1,876 ಬೂತ್‌ಗಳಲ್ಲಿ ಬೂತ್‌ ಅಭಿಯಾನ ಪೂರ್ತಿಯಾಗಿದೆ. ಬೂತ್‌ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಎರಡನೇ ಸುತ್ತಿನಲ್ಲಿ ಏ.19ರಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ಅವರು ಮಂಗಳೂರಿನಲ್ಲಿ ವಕೀಲರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಏ.20ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಧ್ಯಾಹ್ನ ಬಂಟ್ವಾಳ, ಸಂಜೆ ಬೆಳ್ತಂಗಡಿಯಲ್ಲಿ ಪ್ರಚಾರ ಸಭೆ ನಡೆಸುವರು. ಏ.22ರಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಸುಳ್ಯ ಹಾಗೂ ಮಂಗಳೂರಿನಲ್ಲಿ ರೋಡ್‌ಶೋ ನಡೆಸುವರು.

ಪ್ರಧಾನಿ ಭದ್ರತೆಯ ಎಸ್‌ಪಿಜಿ ಅಧಿಕಾರಿಗಳ ಸೂಚನೆ ಪ್ರಕಾರ ಸಾಮಾನ್ಯರು ಸೇರಿದಂತೆ ಪಕ್ಷದ ಪದಾಧಿಕಾರಿಗಳಿಗೆ ಪ್ರಧಾನಿಯ ಸ್ವಾಗತಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಕ್ಷಣದಲ್ಲಿ ಮೇಯರ್‌ ಹಾಗೂ ಇತರೆ ಪ್ರಮುಖರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಇದು ನಮಗೂ ಬೇಸರವಾಗಿದೆ ಎಂದರು. ಪ್ರಧಾನಿ ಅವರು ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಾರಾಯಣಗುರು ಪ್ರತಿಮೆಯನ್ನು ಇಡೀ ವಿಶ್ವದ ಜನತೆ ನೋಡುವಂತಾಯಿತು. ಇಡೀ ರೋಡ್‌ಶೋ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್‌ ಆರ್ವಾರ್‌, ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್‌ಕುಮಾರ್‌, ಮುಖಂಡರಾದ ರವಿಶಂಕರ ಮಿಜಾರ್‌, ಜಗದೀಶ ಶೇಣವ, ಸಂಜಯ ಪ್ರಭು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ