ಕನನಪ್ರಭ ವಾರ್ತೆ ಚಿಂತಾಮಣಿ
ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಎಂಎಲ್ಸಿ ಭಾರತಿ ಶೆಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಮಾತನಾಡಿ, ಮಹಿಳಾ ಮೀಸಲಾತಿಯನ್ನು ಮೂಲೆಗುಂಪು ಮಾಡಿದ್ದ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಈಗ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಜಾರಿಗೆ ತರಲು ಮುಂದಾಗುತ್ತಿದ್ದರೆ ಅದಕ್ಕೆ ತಾಂತ್ರಿಕ ಅಡೆತಡೆಗಳನ್ನು ಒಡ್ಡುವ ಮೂಲಕ ಮಹಿಳೆಯರಿಗೆ ಅನ್ಯಾಯ ವೆಸಗಲು ಕಾಂಗ್ರೆಸ್ ಮುಂದಾಗುತ್ತಿರುವುದು ಖಂಡನೀಯವೆಂದರು.ತಹಸೀಲ್ದಾರ್ ವಿರುದ್ಧ ಆಕ್ರೋಶ;
ಮೊಬೈಲ್ ಕರೆ ಮಾಡಿ ತಹಸೀಲ್ದಾರರನ್ನು ಮಾತನಾಡಿಸಿದ ಭಾರತಿ ಶೆಟ್ಟಿರವರು ತಹಸೀಲ್ದಾರರ ಕಾರ್ಯವೈಖರಿಯನ್ನು ಪ್ರಶ್ನಿಸಿ, ನೀವು ಜನಸೇವಕರು ಎಂಬುದು ನೆನಪಿನಲ್ಲಿಟ್ಟುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆಂದು ಎಚ್ಚರಿಕೆ ಮಾತುಗಳನ್ನಾಡಿದರು.
ಬಿಜೆಪಿ ಮುಖಂಡ ಜಿ.ಎನ್.ವೇಣುಗೋಪಾಲ್ ಮಾತನಾಡಿ, ಸಾಂವಿಧಾನಿಕವಾಗಿ ನಡೆಯಬೇಕಾದ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯನ್ನು ರಾಜಕೀಯ ಲಾಭ- ನಷ್ಟದ ದೃಷ್ಟಿಕೋನದಲ್ಲಿ ನೋಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆಯೆಂದು ಆರೋಪಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಐತಿಹಾಸಿಕ ತೀರ್ಪುಗಳಿಗೆ ಸಹಮತವನ್ನು ವ್ಯಕ್ತಪಡಿಸದಿರುವುದು ಖಂಡನೀಯವಾಗಿದೆಯೆಂದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜಣ್ಣ, ನಗರ ಮಂಡಲ ಅಧ್ಯಕ್ಷ ಗೋವಿಂದರಾಜು, ಗಾಜಲ ಶಿವ, ಗೋಕುಲ್ ಶ್ರೀನಿವಾಸ್, ನಿಕಟಪೂರ್ವ ಅಧ್ಯಕ್ಷ ಮಹೇಶ್ ಬೈ, ಕೆ.ಎಂ. ರಾಜಶೇಖರರೆಡ್ಡಿ, ಬನಹಳ್ಳಿ ಬಿ.ಎನ್.ಮಂಜುನಾಥ್, ಶೃತಿ, ರೋಹಿಣಿ, ಗೌತಮಿ, ದೇವರಾಜ್, ಕರಕಮಾಕಲಹಳ್ಳಿ ದೇವರಾಜ್, ಆಂಜಪ್ಪ, ಪಂಕಜಾ ಬಿಜೆಪಿ ಮಹಿಳಾ ಘಟಕದ ಪದಾಧಿಕಾರಿಗಳು ಸೇರಿದಂತೆ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಇದ್ದರು.