ಕೊಪ್ಪಳ: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಕೂಡಲೇ ಅನುದಾನ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಹಿಂದ ನಾಯಕ ಎನ್ನುವ ಸಿದ್ದರಾಮಯ್ಯ ಅವರು ಅಹಿಂದ ವರ್ಗಕ್ಕೆ ಕಲ್ಲು ಹಾಕುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿಕಾರಿದರು.
ಕಳೆದ ೨೦೨೩ರ ಬಜೆಟ್ನಲ್ಲಿ ರಾಜ್ಯ ಸರ್ಕಾರ ಡಿ. ದೇವರಾಜ ಅರಸರು ಅಭಿವೃದ್ಧಿ ನಿಗಮಕ್ಕೆ ₹೫೦ ಕೋಟಿ ಘೋಷಿಸಿದೆ. ಆದರೆ ಬಳಕೆ ಕಡಿಮೆ ಮಾಡಿದೆ. ಹೀಗೆ ವಿಶ್ವಕರ್ಮ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಸವಿತಾ ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ಧಿ ನಿಗಮ, ಮಡಿವಾಳ ನಿಗಮ, ಒಕ್ಕಲಿಗ ಅಭಿವೃದ್ಧಿ ನಿಗಮ ಹೀಗೆ ಹಲವು ಅಭಿವೃದ್ಧಿ ನಿಗಮಗಳಿಗೆ ಸಮರ್ಪಕ ಅನುದಾನ ಬಿಡುಗಡೆಯಾಗಿಲ್ಲ. ಕೂಡಲೇ ಒಬಿಸಿಯಡಿ ಬರುವ ನಿಗಮಗಳಿಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಬೇಕು ಆಗ್ರಹಿಸಲಾಯಿತು.ಬಿಜೆಪಿಯ ಕೆ.ಎಸ್. ಹನುಮಂತ, ಫಕೀರಪ್ಪ ಆರೇರ್, ದುರುಗಪ್ಪ, ಉಮೇಶ ಕುರಡಕೇರ, ಗುರಪ್ಪ, ಶ್ರೀನಿವಾಸ, ರವಿ, ದೊಡ್ಡಯ್ಯ, ಗವಿಸಿದ್ದಪ್ಪ ಹಾಗೂ ಹಲವು ಮುಖಂಡರು ನೇತೃತ್ವ ವಹಿಸಿದ್ದರು.