ಶ್ರೀರಾಮ ಭಕ್ತ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jan 04, 2024, 01:45 AM IST
ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬುಧವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, 31 ವರ್ಷಗಳ ಹಳೆ ಪ್ರಕರಣವನ್ನು ರಾಮ ಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿರುವ ರಾಮಭಕ್ತ ಶ್ರೀಕಾಂತ್ ಪೂಜಾರಿ ಬಂಧಿನವನ್ನು ಖಂಡಿಸುತ್ತೇವೆ ಎಂದರು.

- ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೆರವಣಿಗೆ । ಆಜಾದ್‌ ಪಾರ್ಕ್‌ನಲ್ಲಿ ಧರಣಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, 31 ವರ್ಷಗಳ ಹಳೆ ಪ್ರಕರಣವನ್ನು ರಾಮ ಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿರುವ ರಾಮಭಕ್ತ ಶ್ರೀಕಾಂತ್ ಪೂಜಾರಿ ಬಂಧಿನವನ್ನು ಖಂಡಿಸುತ್ತೇವೆ ಎಂದರು.

ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಇದರ ಅಂಗವಾಗಿ ರಾಮ ಮಂದಿರ ರಾಮಜನ್ಮ ಭೂಮಿ ನ್ಯಾಸ್ ತೀರ್ಥಕ್ಷೇತ್ರ ಟ್ರಸ್ಟ್ ನಿಂದ ಮನೆ ಮನೆಗೆ ಮಂತ್ರಾಕ್ಷತೆ ಮತ್ತು ಕರಪತ್ರಗಳನ್ನು ಹಂಚಲಾಗುತ್ತಿದೆ. ಈ ವಿಚಾರ ಪ್ರಸ್ತಾವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರ ಕಾಲಿನಲ್ಲಿ ನಡುಕ ಉಂಟಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಗುತ್ತದೆ ಎಂಬ ಭೀತಿ ಮೂಡಿದೆ ಎಂದು ಆರೋಪಿಸಿದರು.

ಒಂದೆಡೆ ತಾವೇ ಘೋಷಿಸಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರಲಾಗುತ್ತಿಲ್ಲ. ಖಜಾನೆ ಖಾಲಿ ಆಗಿದೆ. ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ. ಮತ್ತೊಂದೆಡೆ ಮನೆ ಮನೆಯಲ್ಲಿ ಶ್ರೀರಾಮನ ಹೆಸರಲ್ಲಿ ಹಿಂದೂ ಸಮಾಜ ಜಾಗೃತಿಯಾಗುತ್ತಿದೆ. ಈ ಕಾರಣದಿಂದ ಚುನಾವಣೆಯಲ್ಲಿ ಬಹಳ ದೊಡ್ಡ ಹಿನ್ನಡೆ ಆಗಬಹುದು ಎನ್ನುವ ಭಯದಿಂದ ಈ ಅಭಿಯಾನ ಹತ್ತಿಕ್ಕುವ ಸಲುವಾಗಿ 31 ವರ್ಷಗಳ ನಂತರ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಜನ್ಮ ಭೂಮಿ ಹೋರಾಟದಲ್ಲಿ ಭಾಗವಹಿಸಿದವರನ್ನ ಬಂಧಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಈ 31 ವರ್ಷದಲ್ಲಿ ಮೂರು ಬಾರಿ ಕಾಂಗ್ರೆಸ್ ಆಡಳಿತ ನಡೆಸಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿ 5 ವರ್ಷ ಆಡಳಿತ ಮುಗಿಸಿದ್ದಾರೆ. ಅಂದೇ ಬಂಧಿಸಬಹುದಿತ್ತು. ಹೀಗ್ಯಾಕೆ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಜನ ಸಾಮಾನ್ಯರಲ್ಲಿ ಉದ್ಭವಿಸುತ್ತದೆ. ಇದಕ್ಕೆ ತಕ್ಕ ಉತ್ತರವನ್ನೂ ನೀಡಲಿದ್ದಾರೆ. ಬಿಜೆಪಿ ಯಲ್ಲಿರುವ ಹಿಂದೂಗಳಿಗಷ್ಟೇ ಅಲ್ಲದೆ ಕಾಂಗ್ರೆಸ್‌ನ ಹಿಂದೂಗಳಿಗೂ ಇದು ನೋವು ತಂದಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್‌ ಶೆಟ್ಟಿ ಮಾತನಾಡಿ, ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಶ್ರೀರಾಮನನ್ನು ವಿರೋಧಿಸುತ್ತಲೇ ಬಂದಿದೆ. ಈಗಲೂ ಹಿಂದೂ ಕಾರ್ಯಕರ್ತರು, ರಾಮನ ಭಕ್ತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂವಾಗಿ ಹುಟ್ಟಿ, ಹಿಂದುತ್ವಕ್ಕೆ ದ್ರೋಹ ಬಗೆ ಯುವ ಕೆಲಸವನ್ನು ಸಿದ್ದರಾಮಯ್ಯರನ್ನು ಶ್ರೀರಾಮಚಂದ್ರ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಮಾತನಾಡಿ, ಸಿದ್ದರಾಮಯ್ಯರನ್ನು ಧರ್ಮ ವಿರೋಧಿ, ಜನ ವಿರೋಧಿ, ರಾಷ್ಟ್ರದ್ರೋಹಿ ಸಿಎಂ ಎಂದು ಜರಿದರು. ಅವರ ವಿರುದ್ಧ ಜನ ಜಾಗೃತಿ ಮೂಡಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. 500 ವರ್ಷಗಳ ಹೋರಾಟದ ಇತಿಹಾಸ ಇರುವ ಹಿರಿಯರ ಗೌರವಕ್ಕೆ ಕಾಂಗ್ರೆಸ್ ಸರ್ಕಾರ ಚ್ಯುತಿ ಬರುವ ರೀತಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.

ಆಟೋ ಚಾಲಕರಾದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಧರ್ಮದ ಕಾರ್ಯಗಳನ್ನು ಮಾಡುತ್ತಿರುವ ಸಜ್ಜನ. ಅವರನ್ನ ಏಕಾ ಏಕಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ನೂರಾರು ಕೊಲೆ ಮಾಡಿರುವ ಪಿಎಒಐ, ಎಸ್‌ಡಿಪಿಐನ 203ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಕೊಲೆ ಆರೋಪ ಎದುರಿಸುತ್ತಿರುವ ಪ್ರಕರಣ ಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದಿದೆ ಎಂದು ಆರೋಪಿಸಿದರು.

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಯಾ ಪೈಸೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ, ಈಗ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಿಲ್ಲ ಎನ್ನುತ್ತಿದ್ದಾರೆ. ದೇಶದ್ರೋಹಿಗಳ ಜೊತೆ ಕೈಜೋಡಿ ಸಿರುವ ಅವರಿಗೆ ಯಾವುದೇ ಕಾರಣಕ್ಕೂ ಆಹ್ವಾನ ಸಿಗುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ನಗರಾಧ್ಯಕ್ಷ ಮಧು ಕುಮಾರ್ ರಾಜ್ ಅರಸ್, ಜಿಪಂ ಮಾಜಿ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್, ಮುಖಂಡರಾದ ಕೋಟೆ ರಂಗನಾಥ್, ಬಿ.ರಾಜಪ್ಪ, ಈಶ್ವರಳ್ಳಿ ಮಹೇಶ್, ಪುಷ್ಪರಾಜ್, ಆಲ್ದೂರು ಶಶಿ ಇದ್ದರು. 3 ಕೆಸಿಕೆಎಂ 4

ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬುಧವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

49 ಕೋಟಿ ರು. ಲಾಟರಿ - ಹೆಣ್ಣುಮಗು ತಂದ ಅದೃಷ್ಟ !
ಬ್ರಹ್ಮಕಲಶೋತ್ಸವದಿಂದ ಧಾರ್ಮಿಕ ಪ್ರಜ್ಞೆ: ಹರಿನಾರಾಯಣ ದಾಸ ಆಸ್ರಣ್ಣ