ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Feb 08, 2026, 03:30 AM IST
ತಿಮ್ಮಾಪೂರ ರಾಜೀನಾಮೆಗೆ ಆಗ್ರಹನಗರದಲ್ಲಿ ಬೃಹತ್ ಪ್ರತಿಭಟನೆ | Kannada Prabha

ಸಾರಾಂಶ

ಅಬಕಾರಿ ಹಗರಣದಲ್ಲಿ ಭಾಗಿಯಾಗಿರುವ ಆರ್.ಬಿ. ತಿಮ್ಮಾಪುರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಅಬಕಾರಿ ಹಗರಣದಲ್ಲಿ ಭಾಗಿಯಾಗಿರುವ ಆರ್.ಬಿ. ತಿಮ್ಮಾಪುರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಪ್ರತಿಕೃತಿ ದಹಿಸಿ ರಾಜೀನಾಮೆಗೆ ಆಗ್ರಹಿಸಿದರು.

ಭ್ರಷ್ಟಾಚಾರದಲ್ಲಿ ನಿಸ್ಸೀಮರಾದ ತಿಮ್ಮಾಪುರ ಅವರು ಹಗರಣ ಮುಚ್ಚಿ ಹಾಕಲು ಹೊರಟಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದರಲ್ಲಿ ಪಾಲುದಾರರಾಗಿದ್ದಾರೆಂದು ಮುಖಂಡರು ಆರೋಪಿಸಿದರು.

ರಾಜ್ಯಾದ್ಯಂತ ಪ್ರತಿ ಗ್ರಾಮಗಳಲ್ಲಿ ಮದ್ಯ ಮಾರಾಟ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿರುವ 5 ಗ್ಯಾರಂಟಿಗಳಲ್ಲಿ 6ನೇ ಗ್ಯಾರಂಟಿ ಮದ್ಯ ಮಾರಾಟ ಎಂಬಂತಾಗಿದೆ. ರಾಜ್ಯದ ಇತಿಹಾಸದಲ್ಲಿ ಅಬಕಾರಿ ಹಗರಣ ದೊಡ್ಡದಾಗಿದೆ ಎಂದು ಹೇಳಿದರು.

ಈಗಾಗಲೇ ಹಗರಣದ ಫೋಟೋ, ಆಡಿಯೋ ದಾಖಲೆಗಳಿದ್ದರೂ ಸಚಿವ ತಿಮ್ಮಾಪುರ ಅವರು ರಾಜೀನಾಮೆ ನೀಡಿಲ್ಲ. ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕರಾದ ಜಗದೀಶ ಗುಡಗುಂಟಿ, ಸಿದ್ದು ಸವದಿ, ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ, ಚುನಾವಣೆ ಉಸ್ತುವಾರಿ ಅರುಣ ಶಹಾಪುರ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ವೀರಣ್ಣ ಚರಂತಿಮಠ, ರಾಜಶೇಖರ ಶೀಲವಂತ, ಎಂ.ಕೆ.ಪಟ್ಟಣಶೆಟ್ಟಿ, ಅರುಣ ಕಾರಜೋಳ, ಬಸವರಾಜ ಹುನಗುಂದ, ರಾಜು ನಾಯ್ಕರ, ಸವಿತಾ ಲೆಂಕಣ್ಣವರ್, ಶಶಿಕಲಾ ಮಜ್ಜಗಿ, ಶೋಭಾ ರಾವ್, ಶ್ರೀನಾಥ ಸಜ್ಜನ, ಸುರೇಶ ಕೊಣ್ಣೂರ, ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಶಿವಾನಂದ ಸುರಪುರ, ವೀರಣ್ಣ ಹಳೇಗೌಡರ, ಹೂವಪ್ಪ ರಾಠೋಡ, ಗಿರೀಶ ಭಾಂಡಗೆ ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ