ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಿನ್ನಿಗೋಳಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jun 25, 2025, 11:47 PM IST
ಕಿನ್ನಿಗೋಳಿ ಬಿಜೆಪಿ ಪ್ರತಿಭಟನೆ  | Kannada Prabha

ಸಾರಾಂಶ

ಬಿಜೆಪಿಯ ಮೂಲ್ಕಿ ಮೂಡಬಿದಿರೆ ಮಂಡಲ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಸೋಮವಾರ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಪ್ರತಿಭಟನೆ ಸಂಪನ್ನಗೊಂಡಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಿಂದ ತುಂಬಿ ತುಳುಕುತ್ತಿದ್ದು ಕಾಂಗ್ರೆಸ್ ಪಕ್ಷದ ಶಾಸಕರೇ ಆರೋಪಿಸುತ್ತಿದ್ದಾರೆಂದು ಬಿಜೆಪಿಯ ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಜಿ ಶೆಟ್ ಹೇಳಿದರು.

ಬಿಜೆಪಿಯ ಮೂಲ್ಕಿ ಮೂಡಬಿದಿರೆ ಮಂಡಲ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ‌ ಮಾತನಾಡಿ, ರಾಜ್ಯವನ್ನು ಕಾಂಗ್ರೆಸ್‌ ಸರ್ಕಾರ ಎ.ಟಿ.ಎಂ ಆಗಿ ಪರಿವರ್ತಿಸಿದ್ದು ಮೂಡಾ ಹಗರಣ, ವಸತಿ ಹಗರಣ ಹೀಗೆ ನಾನಾ ಹಗರಣಗಳಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ, ಗ್ಯಾರಂಟಿಗಳನ್ನು ಅವರಿಗೆ ಪೂರೈಸಲು ಅಸಾಧ್ಯವಾಗಿದೆ ಎಂದರು.

ಈ ಸಂದರ್ಭ ಬಿಜೆಪಿ ಮುಖಂಡರಾದ ಈಶ್ವರ್ ಕಟೀಲ್, ಭುವನಾಭಿರಾಮ ಉಡುಪ, ಕಸ್ತೂರಿ ಪಂಜ, ಸೋಂದ ಬಾಸ್ಕರ ಭಟ್, ಅಭಿಲಾಷ್ ಶೆಟ್ಟಿ ಕಟೀಲು, ದಿವಾಕರ ಕರ್ಕೇರ, ಪ್ರವೀಣ್ ಕಟೀಲು, ಅರುಣ್ ಮಲ್ಲಿಗೆಯಂಗಡಿ, ಕೇಶವ ಕರ್ಕೇರ, ಲೋಕಯ್ಯ ಸಾಲಿಯಾನ್, ಹೇಮಲತಾ, ಶೈಲೇಶ್ ಅಂಚನ್, ಉಮಾನಾಥ್, ಚರಣ್ ಕಟೀಲು, ವರುಣ್ ಶೇಡಿಗಾರ್, ಅಶೋಕ್ ಕೆಮ್ಮಡೆ, ಸುಧೀರ್ ಪಟ್ಟೆ, ಬೇಬಿ ಕೆಮ್ಮಡೆ, ಭಾಸ್ಕರ ಪೂಜಾರಿ, ಪ್ರೇಮ್ ರಾಜ್ ಶೆಟ್ಟಿ ಬರ್ಕೆ, ತಿಲಕ್ ರಾಜ್ ಶೆಟ್ಟಿ, ಕಪಿಲ ಗುತ್ತಕಾಡ್ ಜಯನಂದ ಮೂಲ್ಕಿ, ಚಂದ್ರಶೇಖರ ಬರ್ಕೆ, ದಯಾನಂದ ಶೆಟ್ಟಿ ಕೆ.ಜಿ.ಬೆಟ್ಟು, ಸಂಜಯ್ ಕೆಮ್ಮಡೆ, ದುರ್ಗಾಪ್ರಸಾದ್ ಶೆಟ್ಟಿ, ಆಶಾ ಸುವರ್ಣ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ