ಕನ್ನಡಪ್ರಭ ವಾರ್ತೆ ಜಮಖಂಡಿ
ಪಕ್ಷಕ್ಕಾಗಿ ದುಡಿದ ಹಲವು ಹಿರಿಯ ಮುಖಂಡರು ರಾಜ್ಯದಲ್ಲಿನ ಬಿಜೆಪಿ ಪರಿಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಬಣಗಳ ಗೊಂದಲ ಸೇರಿದಂತೆ ಎಲ್ಲದಕ್ಕೂ ಹೈಕಮಾಂಡ್ ತಾರ್ಕಿಕ ಅಂತ್ಯ ಹಾಡಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ವಿವಿ ರದ್ದು ಕೈಬಿಡಿ ; ರಾಜ್ಯದ 9 ವಿಶ್ವವಿದ್ಯಾಲಯ ರದ್ದುಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ವಿವಿಗಳಿಗೆ ಬೇಕಾದ ಅನುದಾನ ಬಿಡುಗಡೆ ಗೊಳಿಸಬೇಕು ಎಂದು ಆಗ್ರಹಿಸಿದ ಅವರು, ರಾಜ್ಯ ಸರ್ಕಾರ ಅವೈಜ್ಞಾನಿಕ ಕ್ರಮ ಕೈಗೊಳ್ಳಬಾರದು. ಬದಲಿಗೆ ತಜ್ಞರಿಂದ ತನಿಖೆ ನಡೆಸಿ ವರದಿ ತರಿಸಿಕೊಂಡು ಕ್ರಮ ಜರುಗಿಸಬೇಕು, ಬಡ ಮಕ್ಕಳ ಶಿಕ್ಷಣದ ಹಕ್ಕು ಕಸಿಯುವ ಕೆಲಸ ಮಾಡಬಾರದು ಎಂದರು.ಸುಳ್ಳು ಭರವಸೆ ಬೇಡ; ಸರ್ಕಾರ ಮಂಡಿಸಲಿರುವ ಬಜೆಟ್ನಲ್ಲಿ ಸುಳ್ಳು ಭರವಸೆ ನೀಡುವುದನ್ನು ಕೈಬಿಡಬೇಕು. ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಈಶ್ವರಪ್ಪ, ಗ್ಯಾರಂಟಿ ಯೋಜನೆಗಳು ಶಕ್ತಿ ಕಳೆದುಕೊಂಡಿವೆ. ಕೊಟ್ಟ ಮಾತಿನಂತೆ ನಡೆದುಕೊಂಡು, ಮಹಿಳೆಯರ ಸ್ತ್ರೀಶಕ್ತಿ ಯೋಜನೆಯ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಜನರ ವಿಶ್ವಸ ಕಳೆದುಕೊಂಡಿದೆ. ಅವರಲ್ಲಿಯೂ ಆಂತರಿಕ ಹಲಹ ನಡೆದಿದ್ದು, ಬೂದಿಮುಚ್ಚಿದ ಕೆಂಡದಂತಿದೆ. ಸಚಿವರು ಶಾಸಕರು ಮನಬಂದಂತೆ ಹೇಳಿಕೆ ನೀಡುತ್ತ ಜನರ ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದು ದೂರಿದರು.ಸಭೆ: ಕ್ರಾಂತಿವೀರ ಬ್ರಿಗೇಡ್ನ ಮುಖಂಡರ ಸಭೆ ಮಾ.1ರಂದು ಹುಬ್ಬಳ್ಳಿಯ ಕಾಮತ್ ಯಾತ್ರಿ ನಿವಾಸದಲ್ಲಿ ನಡೆಯಲಿದೆ. ಸಭೆಗೆ ಆಯ್ದ ಮಠಾಧಿಪತಿಗಳು, ಬ್ರಿಗೇಡ್ನ ಮುಖಂಡರು ಭಾಗವಹಿಸಲಿದ್ದು, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳ ಲಾಗುತ್ತದೆ ಎಂದು ಹೇಳಿದರು. ಮಾದುಲಿಂಗ ಮಹಾರಾಜರು, ಮುಖಂಡರು ಇದ್ದರು.