ಕನ್ನಡಪ್ರಭ ವಾರ್ತೆ ಲಿಂಗಸುಗೂರು (ರಾಯಚೂರು)
ಜಿಲ್ಲೆ ಲಿಂಗಸುಗೂರು ಪಟ್ಟಣದ ಬೆಂಗಳೂರು ಬೈಪಾಸ್ ರಸ್ತೆಯಲ್ಲಿನ ಮೈದಾನದಲ್ಲಿ ಮಂಗಳವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ಕುರಿತು ಹೆಮ್ಮೆಯಿಂದ ಮಾತನಾಡುತ್ತಿದೆ, ಆದರೆ ರಾಜ್ಯದ ಜನರಿಗೆ ನಾನು ಆರನೇ ಗ್ಯಾರಂಟಿ ನೀಡುತ್ತೇನೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದು ಬಿಜೆಪಿಯ ಮಾತಲ್ಲ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಬೇಸತ್ತು ನೀಡಲಿರುವ ತೀರ್ಪು, ದಲಿತ, ರೈತ ಹಾಗೂ ಬಡವರ ವಿರೋಧಿ ಮತ್ತು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆಯುವುದು ಖಚಿತವೆಂದರು.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತವನ್ನು ಬುಡಸಮೇತ ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ಮುಂದುವರೆಯಲಿದೆ. ಲಿಂಗಸೂರಿನಿಂದ ಆರಂಭ ವಾಗಿರುವ ಈ ಪಾದಯಾತ್ರೆ ರಾಜ್ಯದ ಜನರ ಧ್ವನಿಯಾಗಿದೆ. ಇದು ಕೇವಲ ಬಿಜೆಪಿ ಕಾರ್ಯಕರ್ತರ ಪಾದಯಾತ್ರೆಯಲ್ಲ, ರೈತರು, ದಲಿತರು, ಬಡವರು, ಯುವಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ನಡೆಯುತ್ತಿರುವ ಜನಪರ ಹೋರಾಟವಾಗಿದೆ. ಈ ಪಾದಯಾತ್ರೆ ಕರ್ನಾಟಕದ ರಾಜಕೀಯ ಬದಲಾವಣೆಗೆ ಮುನ್ನುಡಿ ಬರೆಯಲಿದೆ ಎಂದರು.ರಾಜಕೀಯ ದಿಕ್ಕು ಬದಲಿಸುವ ಶಕ್ತಿ ಪಾದಯಾತ್ರೆಗಿದೆ: ಐತಿಹಾಸಿಕ ಪಾದಯಾತ್ರೆಗೆ ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿಯಿದೆ. ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ, ಯುವಜನ ವಿರೋಧಿ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನವಾಗಿದೆ.
ಹೋರಾಟಕ್ಕೆ ಜಯ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆ ಪಡೆಯ ಬೇಕಾ ಯಿತು. ಬಿಜೆಪಿ ಹೋರಾಟ ತೀವ್ರಗೊಳಿಸಿದ ಬಳಿಕ ಸರ್ಕಾರ ಆತುರಾತುರವಾಗಿ ರಾಜೀನಾಮೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಯಿತು. ವಿಪಕ್ಷ ನಾಯಕ ಆರ್.ಅಶೋಕ್ ಅವರು ಅಹೋರಾತ್ರಿ ಹೋರಾಟ ಘೋಷಿಸಿದ ತಕ್ಷಣವೇ ಸದನದ ಕಲಾಪವನ್ನು ಮೊಟಕುಗೊಳಿಸಿ ಸರ್ಕಾರ ಜವಾಬ್ದಾರಿಯಿಂದ ನುಣುಚಿ ಕೊಳ್ಳುವ ಪ್ರಯತ್ನ ಮಾಡಿತು. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ನಡೆಸಿದ ಅಹೋರಾತ್ರಿ ಹೋರಾಟದ ಪರಿಣಾಮವಾಗಿ ಮೊದಲ ಹಂತದ ಜಯ ದೊರೆತಿದೆ ಎಂದರು.
ಎಸ್ ಸಿಪಿ- ಟಿಎಸ್ಪಿ ಯೋಜನೆಗಳಡಿ ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬ ಆರೋಪಗಳಿಗೂ ಸರ್ಕಾರ ಉತ್ತರ ನೀಡಬೇಕು. ಡಿಕೆ ಶಿವಕುಮಾರ್ ಅವರೇ, ದಲಿತರ ಹಣದ ವಿಚಾರದಲ್ಲಿ ರಾಜ್ಯದ ಜನತೆಗೆ ಸ್ಪಷ್ಟ ಉತ್ತರ ನೀಡಬೇಕು, ಅದೇ ರೀತಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಮತದಾನ ಅಕ್ರಮಗಳ ಕುರಿತು ಮಾತನಾಡಿದ್ದಕ್ಕಾಗಿ ರಾಜೀನಾಮೆ ಪಡೆಯಲಾಗಿದೆ. ಆಗ ನಿಮ್ಮ ದಲಿತಪರ ಕಾಳಜಿ ಎಲ್ಲಿತ್ತು ? ಎಂದು ಪ್ರಶ್ನಿಸಿದ ಅವರು, ದಲಿತರ ಪರ ಭಾಷಣ ಮಾಡುವುದರಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ. ದಲಿತರ ಹಣ, ಹಕ್ಕು ಮತ್ತು ಬದುಕನ್ನು ರಕ್ಷಿಸುವ ಜವಾಬ್ದಾರಿಯನ್ನು ಸರ್ಕಾರ ನಿಭಾಯಿಸಬೇಕು ಎಂದರು.
ವಾಲ್ಮೀಕಿ ಸಮುದಾಯದ ಯುವಕನ ಹತ್ಯೆ ಸೇರಿದಂತೆ ರಾಜ್ಯದಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಸರ್ಕಾರ ಗಂಭೀರ ವಾಗಿ ಸ್ಪಂದಿಸಬೇಕು. ಘಟನೆಗಳ ನಂತರ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಬೇಕಿತ್ತು. ಆದರೆ ಅಧಿಕಾರದ ದರ್ಪ ದಿಂದ ಜನರ ನೋವಿಗೆ ಸ್ಪಂದಿಸುತ್ತಿಲ್ಲ. ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯ ಬಳಿಕ ಅವರ ಕುಟುಂಬಕ್ಕೆ ನೀಡಿದ ನೆರವಿನ ರೀತಿಯಲ್ಲೇ, ಸಂಕಷ್ಟದಲ್ಲಿರುವ ಪ್ರತಿಯೊಂದು ಕುಟುಂಬಕ್ಕೂ ಸರ್ಕಾರ ಮಾನವೀಯವಾಗಿ ಸ್ಪಂದಿಸಬೇಕು ಎಂದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾದಾಗ ಅವರು ಸುಮ್ಮನೆ ಕೂರಲಿಲ್ಲ. ರೈತರ ಹಾಗೂ ಸಂತ್ರಸ್ತರ ಬಳಿಗೆ ತೆರಳಿ ಅವರ ನೋವನ್ನು ಆಲಿಸಿದರು. ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ನೀಡಿದರು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಸಂಕಷ್ಟ ದಲ್ಲಿರುವ ಜನರಿಗೆ ಸಮರ್ಪಕ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
---