ಯೋಜನೆಗಳನ್ನು ಜನರಿಗೆ ತಲುಪಿಸುವುದೆ ಬಿಜೆಪಿ ಗುರಿ: ಭಗವಂತ ಖೂಬಾ

KannadaprabhaNewsNetwork |  
Published : Jan 06, 2024, 02:00 AM IST
ಚಿತ್ರ 5 ಬಿಡಿಆರ್52 | Kannada Prabha

ಸಾರಾಂಶ

ಕಮಲನಗರ ಪಟ್ಟಣದ ಮಿನಿ ಬಸ್ ನಿಲ್ದಾಣದ ಹತ್ತಿರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್‌ ಸಿಲಿಂಡರ್ ವಿತರಿಸಿದರು.

ಕನ್ನಡಪ್ರಭ ವಾರ್ತೆ ಕಮಲನಗರ

ಕೇಂದ್ರ ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಲಾಭವನ್ನು ಪಡೆದ ಫಲಾನುಭವಿಗಳು ದೇಶದ ಪ್ರತಿ ಮನೆಯಲ್ಲೂ ಇದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ಜನಸಾಮನ್ಯರಿಗೂ ತಲಿಪಿಸುವುದೆ ನರೇಂದ್ರ ಮೋದಿ ಆಡಳಿತದ ಗುರಿಯಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಪಟ್ಟಣದ ಮಿನಿ ಬಸ್ ನಿಲ್ದಾಣದ ಹತ್ತಿರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲಿಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಕಾರ್ಯವೈಖರಿಯಿಂದ ಸಾರ್ವಜನಿಕರ ಭರವಸೆ ಹೆಚ್ಚಿದೆ ಎಂದರು.

ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಸಂಘಟಿಸುವುದು. ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಇದರ ಸೌಲಭ್ಯಗಳು ಸಿಗುವಂತೆ ಮಾಡುವ ಈ ಕಾರ್ಯಕ್ರಮವು ಯಶಸ್ವಿಗೊಳಿಸಬೇಕಾಗಿದೆ. ಅಧಿಕಾರಿಗಳು ಈ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಅರಿವು ಮೂಡಿಸುವಂತಾಗಬೇಕೆಂದು ಎಂದು ತಿಳಿಸಿದರು.

ಮೋದಿ ಸರ್ಕಾರದಲ್ಲಿ ಸಂಸದನಾಗಿ 10 ವರ್ಷಗಳಲ್ಲಿ ಬೀದರ್‌ ಲೋಕಸಭೆ ಕ್ಷೇತ್ರದಲ್ಲಿ ಹೆದ್ದಾರಿ, ಸೋಲಾರ್ ಪಾರ್ಕ, ರೈಲ್ವೆ, ವಿಮಾನ ನಿಲ್ದಾಣ, ಸಿಪೆಟ್ ಕಾಲೇಜು ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವೆ. ನಮ್ಮ ಸರ್ಕಾರದ ಎಲ್ಲಾ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸಿದ್ದೇನೆ. ನನ್ನ ಕಾರ್ಯವೈಖರಿಯನ್ನು ಮೆಚ್ಚಿ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಿದ್ದಾರೆ ಎಂದು ಹೇಳಿದರು.

10 ಸಾವಿರ ಕೋಟಿ ರು. ಹೂಡಿಕೆಯಲ್ಲಿ ಔರಾದ್‌ ತಾಲೂಕಿಗೆ ಸೋಲಾರ್ ಪಾರ್ಕ್‌ ಹಾಗೂ 300 ಕೋಟಿ ರು. ಗಳಲ್ಲಿ ದಕ್ಷಿಣ ಭಾರತದ ಅತಿದೊಡ್ಡ ಪವರ್‌ ಪ್ಲಾಂಟ್ ಯೋಜನೆ ಮಂಜೂರು ಮಾಡಿಸಿರುವೆ. ಇದರಿಂದ 10 ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ ಎಂದರು.

ಗ್ರಾಪಂ ಅಧ್ಯಕ್ಷರಾದ ಸುಶೀಲಾ ಮಹೇಶ ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದರು. ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಸುಮಿತಕುಮಾರ, ನಬಾರ್ಡ್‌ ಬ್ಯಾಂಕಿನ ವ್ಯವಸ್ಥಾಪಕ ರಾಮರಾವ, ಕರ್ನಾಟಕ ಗ್ರಾಮೀಣ ಬ್ಯಾಂಕನ ವ್ಯವಸ್ಥಾಪಕ ಉದಯಕುಮಾರ, ಪೋಸ್ಟ್ ಕಚೇರಿಯ ವ್ಯವಸ್ಥಾಪಕ ಶಿಖರ ಬಾಬು, ಗ್ರಾಪಂ ಪಿಡಿಒ ರಾಜಕುಮಾರ ತಂಬಾಕೆ, ಮಾಜಿ ತಾಪಂ ಸದಸ್ಯ ನೀಲಕಂಠರಾವ ಕಾಂಬಳೆ, ಮುಖಂಡರಾದ ಗಣಪತರಾವ ಖೂಬಾ, ಬಸವರಾಜ ಪಾಟೀಲ್, ಮಾಧವರಾವ ಚಾಂಗೋಣೆ, ದೇವಾನಂದ ಪಾಟೀಲ್, ಈರಣ್ಣಾ ಕಾರಬಾರಿ ಹಾಗೂ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ
ತ್ಯಾಜ್ಯ ವಿಲೇವಾರಿ ಘಟಕ ತೆರವಿಗೆ ಆಗ್ರಹ