ಕನ್ನಡಪ್ರಭ ವಾರ್ತೆ ಶಿವಮೊಗ್ಗ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯವರ ಯಾವ ಪ್ರಯತ್ನವೂ ಸಫಲ ಆಗುವುದಿಲ್ಲ. ನಮ್ಮ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷರು ಶೇ.20ರಷ್ಟು ಜನರಿಗೂ ಗ್ಯಾರಂಟಿ ಯೋಜನೆ ತಲುಪಿಲ್ಲ ಎಂದು ಹೇಳಿದ್ದಾರೆ. ಅವರ ತೋಟದ ಮನೆ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಗ್ಯಾರಂಟಿ ಯೋಜನೆ ಲಾಭ ಪಡೆಯುತ್ತಿದ್ದಾರೆ. ಈಗ ಭಾವನಾತ್ಮಕತೆ ಎಲ್ಲ ಹೋಗಿದೆ, ಅದು ಡೂಪ್ಲಿಕೇಟ್ ಎಂದು ಜನರಿಗೆ ಗೊತ್ತಾಗಿದೆ. ವಿಧಾನಸಭಾ ಚುನಾವಣೆ ವೇಳೆ ಜನರಿಗೆ ಹೊಟ್ಟೆ ಹಸಿದಿತ್ತು. ಹಾಗಾಗಿ ನಮ್ಮನ್ನು ಪುರಸ್ಕರಿಸಿದ್ದಾರೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಜೈ ಆಂಜನೇಯ ಅಂದಿದ್ದರು. ಆದರೂ ಸೋತರು, ಏಕೆಂದರೆ ಮೋದಿ, ಬಿಜೆಪಿಯವರ ಮೇಲೆ ಆಂಜನೇಯನಿಗೆ ವಿಶ್ವಾಸವಿರಲಿಲ್ಲ. ನಮ್ಮ ಮೇಲೆ ಇತ್ತು. ವಿಧಾನಸಭೆ ರೀತಿ ಲೋಕಸಭೆಯಲ್ಲೂ ಗೆದ್ದು ಕಾಂಗ್ರೆಸ್ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.ಕೊನೆವರೆಗೂ ನಿಮ್ಮ ಜೊತೆ ಇರುತ್ತೇನೆ:
ಗೀತಾ ಅವಶ್ಯಕತೆ ಪಕ್ಷಕ್ಕಿದೆ:
ಸುದ್ದಿಗೋಷ್ಟಿಯಲ್ಲಿ ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಮುಖಂಡರಾದ ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ಜಿ.ಡಿ ಮಂಜುನಾಥ್ ಸೇರಿದಂತೆ ಹಲವರಿದ್ದರು.
ಮಾ.5ರಂದು ಸಾಗರದಲ್ಲಿ ನಡೆಯಲಿರುವ ಈಡಿಗರ ಸಮಾವೇಶಕ್ಕೆ ಆಹ್ವಾನ ಬಂದರೆ ಹೋಗುತ್ತೇನೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಧು ಬಂಗಾರಪ್ಪಗೆ ಜನ್ಮದಿನದ ಸಂಭ್ರಮ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಮ್ಮ 57ನೇ ಜನ್ಮದಿನವನ್ನು ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು. ಈ ಸಂದರ್ಭ ಖ್ಯಾತ ಚಲನ ಚಿತ್ರನಟ ಶಿವರಾಜ್ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಉಪಸ್ಥಿತರಿದ್ದರು.
ಸಚಿವ ಮಧು ಬಂಗಾರಪ್ಪ ಅವರೊಂದಿಗೆ ನಟ ಡಾ. ಶಿವರಾಜಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳಿದ್ದರು.
ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರಿಗೆ ಸಹೋದರಿ ಗೀತಾ ಶಿವರಾಜಕುಮಾರ್ ವಿಶೇಷವಾಗಿ ಕೇಕ್ ತಯಾರಿಸಿ ತಂದಿದ್ದರು. ಈ ಕೇಕ್ ಅನ್ನು ಗೀತಾ ಶಿವರಾಜ್ಕುಮಾರ್ ಅವರೇ ತಯಾರಿಸಿದ್ದು ಎಂಬುದು ವಿಶೇಷ.
ಸಂಭ್ರಮಾಚರಣೆಯಲ್ಲಿ ಮಾತನಾಡಿದ ನಟ ಶಿವರಾಜಕುಮಾರ್, ಮಧು ಅವರಿಗಾಗಿ ಗೀತಾ ಬಹಳ ಪ್ರೀತಿಯಿಂದ ಈ ಕೇಕ್ ತಯಾರಿಸಿದ್ದಾರೆ. ಈ ಕೇಕ್ ಅನ್ನು ತಯಾರಿಸಲು ರಾತ್ರಿ 8 ಗಂಟೆಯಿಂದ ಬೆಳಗ್ಗೆ 4 ಗಂಟೆವರೆಗೆ ಸಮಯ ತೆಗೆದುಕೊಂಡಿದ್ದಾರೆ ಎಂದು ಹ್ಯಾಟ್ರಿಕ್ ಹೀರೋ ಕೇಕ್ ಸೀಕ್ರೆಟ್ ಬಗ್ಗೆ ತಿಳಿಸಿದರು.- - - ಬಾಕ್ಸ್-4
ನಾನು ರಾಜಕೀಯಕ್ಕೆ ಬರುವುದಿಲ್ಲ: ನಟ ಶಿವರಾಜ್ಕುಮಾರ್ರಾಜಕೀಯಕ್ಕೆ ಬರುವುದಿಲ್ಲ. ಆದರೆ, ರಾಜಕೀಯ ಶಕ್ತಿ ನೀಡುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವನ್ನೂ ಮಾಡುತ್ತೇನೆ ಎಂದು ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ ಕುಮಾರ್ ಹೇಳಿದರು.
ಶಿವಮೊಗ್ಗದಲ್ಲಿ ಶನಿವಾರ ಸಚಿವ ಮಧು ಬಂಗಾರಪ್ಪ ಜನ್ಮದಿನ ಆಚರಣೆಯಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ನಿ ಗೀತಾ ಅವರಿಗೆ ರಾಜಕೀಯ ಆಸಕ್ತಿ ಮತ್ತು ಆಸೆ ಎರಡೂ ಇದೆ. ಈಗಾಗಲೇ ಈ ಕ್ಷೇತ್ರದಲ್ಲಿ ಆಕೆ ಗುರುತಿಸಿಕೊಂಡಿದ್ದಾರೆ. ರಾಜಕೀಯ ಕುಟುಂಬದಿಂದ ಬಂದಿರುವ ಗೀತಾ ಅವರಿಗೆ ಸಹೋದರ ಮಧು ಅವರ ಸಹಕಾರದ ಜೊತೆಗೆ ಎಲ್ಲಕ್ಕಿಂತ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪಾಜಿ ಅವರ ಅಭಿಮಾನಿಗಳ ಆಶೀರ್ವಾದ ಇದೆ. ಈ ಬಾರಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಗೀತಾ ಬೆನ್ನಿಗೆ ನಿಂತು ಪ್ರಚಾರ ಮಾಡುವೆ ಎಂದು ಹೇಳಿದರು.ಸಿನೆಮಾ ಬಗ್ಗೆ ಮಾತನಾಡಿದ ಅವರು, ವಿಷಯಾಧಾರಿತ ಸಿನೆಮಾಗಳನ್ನು ಮಾಡುತ್ತಿದ್ದೇನೆ. ಗೋಸ್ಟ್ ರೀತಿಯ ಮೂವಿ ಮಾಡಬೇಕು. ರಾಜ್ಯದಲ್ಲಿರುವ ಸ್ಟಾರ್ ವಾರ್ ಬಗ್ಗೆ ಮಾತನಾಡಿದ ಅವರು, ಈ ಬೆಳವಣಿಗೆ ಒಳ್ಳೆದಲ್ಲ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ತಿಳಿಮಾಡುತ್ತೇವೆ. ಆದರೆ, ನೆಲ-ಜಲದ ವಿಷಯದಲ್ಲಿ ನಮ್ಮಲ್ಲಿ ಒಗ್ಗಟ್ಟಿದೆ. ತಮಿಳುನಾಡಿನಲ್ಲಿ ಸ್ಟಾರ್ ವಾರ್ ಇಲ್ಲ. ಆ ರೀತಿಯ ವಾತಾವರಣ ನಮ್ಮಲ್ಲೂ ಬರಲಿದೆ ಎಂದು ಶಿವಣ್ಣ ಹೇಳಿದರು.
ಗೀತಾ ಶಿವರಾಜ್ ಕುಮಾರ್ ಮಾತನಾಡಿ, ನಾನು ಜಿಲ್ಲೆಯ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ. ಮಾಧ್ಯಮಗಳ ಜತೆ ಮಾತನಾಡಿಲ್ಲ ಅಷ್ಟೆ. ನನ್ನ ಜಿಲ್ಲೆಯ ಜನರ ಪ್ರೀತಿ ನನ್ನ ಮೇಲಿದೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂಬ ಆಸೆ ಇದೆ. ಆದರೆ, ಪಕ್ಷದ ನಾಯಕರು ಏನು ತೀಮಾರ್ಮಾನ ಮಾಡಿದರೂ ಅದಕ್ಕೆ ಬದ್ಧಳಾಗಿ ಮಧು ಜತೆ ಪಕ್ಷಕ್ಕಾಗಿ ಕೆಲಸ ಮಾಡುವೆ ಎಂದು ಹೇಳಿದರು.- - - -2ಎಸ್ಎಂಜಿಕೆಪಿ05:
ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನಾಚರಣೆ ಹಿನ್ನೆಲೆ ಅವರ ಸಹೋದರಿ ಗೀತಾ ಶಿವರಾಜ್ಕುಮಾರ್ ತಯಾರಿಸಿದ ವಿಶೇಷ ಕೇಕ್.- - --2ಎಸ್ಎಂಜಿಕೆಪಿ06:
ಶಿವಮೊಗ್ಗದ ವಿನೋಬ ನಗರ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶನಿವಾರ ಜನ್ಮದಿನಾಚರಣೆ ಆಚರಿಸಿಕೊಂಡರು. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಪತ್ನಿ ಗೀತಾ ಶಿವರಾಜ್ಕುಮಾರ್, ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳಿದ್ದರು.