ದೇಶದ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಶೂನ್ಯ

KannadaprabhaNewsNetwork |  
Published : Jan 23, 2026, 02:30 AM IST
ಪೋಟೊ22ಕೆಎಸಟಿ2: ಕುಷ್ಟಗಿ ಪಟ್ಟಣದ ಪಿಸಿಹೆಚ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆದ ಕುಷ್ಟಗಿ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನೆ ಸಭೆಯಲ್ಲಿ ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿದರು. | Kannada Prabha

ಸಾರಾಂಶ

ಬಿಜೆಪಿಯವರು ಪಕ್ಷ ಕಟ್ಟುವಲ್ಲಿ ಮಾತ್ರ ನಿಸ್ಸಿಮರು, ಆದರೆ ನಮ್ಮ ಕಾಂಗ್ರೆಸ್‌ನವರು ದೇಶ ಕಟ್ಟುವ ಕೆಲಸ ಮಾಡಿದ್ದಾರೆ.

ಕುಷ್ಟಗಿ: 12 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಶೂನ್ಯ ಕೊಡುಗೆ ನೀಡಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಪಟ್ಟಣದ ಪಿಸಿಎಚ್ ಪ್ಯಾಲೇಸ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಡೆದ ಕುಷ್ಟಗಿ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿಯವರು ಪಕ್ಷ ಕಟ್ಟುವಲ್ಲಿ ಮಾತ್ರ ನಿಸ್ಸಿಮರು, ಆದರೆ ನಮ್ಮ ಕಾಂಗ್ರೆಸ್‌ನವರು ದೇಶ ಕಟ್ಟುವ ಕೆಲಸ ಮಾಡಿದ್ದಾರೆ. ಜನಪರ ಯೋಜನೆ ಜಾರಿಗೆ ತಂದಿದ್ದಾರೆ ಎಂದ ಅವರು, ಬಿಜೆಪಿಯವರ ಯೋಜನೆಗಳು ಕೇವಲ ಪ್ರಚಾರಕ್ಕೆ ಸೀಮಿತವಾಗಿವೆ ಆದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ರಾಜ್ಯದಲ್ಲಿ ಶೇ. 90ರಷ್ಟಿದ್ದಾರೆ. ಅವರ ಕುಟುಂಬವೂ ಆರ್ಥಿಕವಾಗಿ ಸಬಲಿಕರಣಗೊಳ್ಳಲು ನಮ್ಮ ಯೋಜನೆ ಸಹಕಾರಿಯಾಗಿವೆ ಎಂದರು.

ಕೇಂದ್ರ ಬಿಜೆಪಿ ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವ ಕೆಲಸ ಮಾಡಬೇಕಿದೆ, ಉನ್ನತ ವ್ಯಾಸಂಗ ಮಾಡಿದವರು ಕಡಿಮೆ ಸಂಬಳಕ್ಕೆ ದುಡಿಯುತ್ತಿರುವದನ್ನು ಕಾಣುತ್ತಿದ್ದೇವೆ. ಜೆಜೆಎಂ ಕಾಮಗಾರಿ ಸಮರ್ಪಕವಾಗಿ ನಡೆಯದಿರುವದು ಗಮನಕ್ಕೆ ಇದೆ. ಈ ಯೋಜನೆ ಅನುಷ್ಟಾನ ಸಲುವಾಗಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ₹6 ಸಾವಿರ ಕೋಟಿ ಹಣ ಬಿಡುಗಡೆಯಾಗಬೇಕಿದೆ. ಇನ್ನೂ ಆಗುತ್ತಿಲ್ಲ ಹಣ ಬಿಡುಗಡೆಯಾದರೆ ಜೆಜೆಎಂ ಕಾಮಗಾರಿ ಮುಗಿಯಲಿದೆ ಎಂದರು.

ಕುಷ್ಟಗಿ ಮತ್ತು ಯಲುಬರ್ಗಾ ನಡುವೆ ಕೇಂದ್ರೀಯ ವಿದ್ಯಾಲಯದ ಪ್ರಸ್ತಾವನೆ ಕಳಿಸಲಾಗಿದ್ದು, ಮಂಜೂರಾಗುವ ನಿರೀಕ್ಷೆಯಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆ ಮತ್ತು ತಾಲೂಕುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವದು ಎಂದರು.

ಕಾಂಗ್ರೆಸ್‌ ಯುವಮುಖಂಡ ದಿಶಾ ಸಮಿತಿಯ ಸದಸ್ಯ ದೊಡ್ಡಬಸವನಗೌಡ ಬಯ್ಯಾಪುರ ಮಾತನಾಡಿ, ಕಾಂಗ್ರೆಸ್‌ ಸರ್ಕಾರವೂ ದೇಶದಲ್ಲಿ ನರೇಗಾ ಯೋಜನೆ, 371ಜೆ ಕಲಂ ಸೇರಿದಂತೆ ಅನೇಕ ಜನೋಪಯೋಗಿ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಈಗ ಬಿಜೆಪಿಯವರು ನರೇಗಾ ಯೋಜನೆಯ ಬದಲಾವಣೆ ಮಾಡುತ್ತಿದ್ದಾರೆ.ಅನುದಾನ ಕೊಡುವಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಕೇವಲ ಉಳ್ಳವರ ಪರವಾಗಿ ಆಡಳಿತ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಅನುದಾನ ಬಳಕೆಯಲ್ಲಿ ಸಂಸದ ರಾಜಶೇಖರ ಹಿಟ್ನಾಳ ಮಾದರಿ ಸಂಸದರಾಗಿದ್ದಾರೆ, ಕುಷ್ಟಗಿ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಮೀಸಲಿಡಬೇಕು, ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಯೋಜನೆಗಳ ಅನುಷ್ಟಾನಕ್ಕೆ ಮುಂದಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಕಾಂಗ್ರೆಸ್‌ ಯುವಮುಖಂಡ ಲಾಡ್ಲೆಮಷಾಕ ದೋಟಿಹಾಳ ಮಾತನಾಡಿ, ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಇಚ್ಚಾಶಕ್ತಿ ಇಲ್ಲ, ಕೇವಲ ಕಾಂಗ್ರೆಸ್‌ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮಾತ್ರ ಗಮನ ಕೊಡುತ್ತಾರೆ, ಇಂತಹ ವಿಷಯಗಳ ಕಡೆ ಗಮನ ಕೊಡುವದನ್ನು ಬಿಟ್ಟು ಅಭಿವೃದ್ದಿ ಪಥದತ್ತ ವಿಚಾರ ಮಾಡಬೇಕು. ಮುಂದಿನ ದಿನಗಳಲ್ಲಿ ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದಿನಿಂದಲೇ ಕಾರ್ಯಕರ್ತರು ಸಿದ್ಧರಾಗಬೇಕು ಎಂದರು.

ಕುಷ್ಟಗಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ ನಾಲತವಾಡ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಪಕ್ಷದ ನಾಯಕರು ಕಾರ್ಯಕರ್ತರ ಪರ ಕೆಲಸ ಮಾಡುವ ಮೂಲಕ ಕಾರ್ಯಕರ್ತರ ಕೈ ಬಲಪಡಿಸಲು ಮುಂದಾಗಬೇಕು ಎಂದರು.

ಮಾಜಿ ಜಿಪಂ ಅಧ್ಯಕ್ಷೆ ಮಾಲತಿ ನಾಯಕ, ಉಮೇಶ ಮಂಗಳೂರು ಸೇರಿದಂತೆ ಅನೇಕರು ಮಾತನಾಡಿದರು.

ಈ ಸಂದರ್ಭದಲ್ಲಿ ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷ ಗೋಪಾಲರಾವ ಕುಲಕರ್ಣಿ, ಮುಖಂಡ ಸೋಮಶೇಖರ ವೈಜಾಪುರ, ವಿಜಯನಾಯಕ, ದುರುಗೇಶ ಮಡಿವಾಳರ, ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ, ನಿರ್ಮಲಾ ಕರಡಿ, ಶಕುಂತಲಮ್ಮ ಹಿರೇಮಠ, ಈರಣ್ಣ ಬಾದಾಮಿ, ದೊಡ್ಡಯ್ಯ ಗದ್ದಡಕಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಫಾರೂಕ್ ಡಾಲಾಯತ್, ಕಲ್ಲಪ್ಪ ತಳವಾರ, ಬುಡ್ನೆಸಾಬ್‌ ಕಲಾದಗಿ, ಬಸವರಾಜ ಮಲ್ನಾಡದ, ಮಹಾಂತೇಶ ಬಾಚಲಾಪುರ, ವೆಂಕಟೇಶ ನಾಯಕ, ಮಹಾಂತೇಶ ಬಂಡೇರ, ಇಮಾಮಸಾಬ್‌ ಗರಡಿಮನಿ ಸೇರಿದಂತೆ ಗ್ಯಾರಂಟಿ ಸಮಿತಿಯ ಸದಸ್ಯರು, ನೂರಾರು ಜನ ಕಾರ್ಯಕರ್ತರು, ಮುಖಂಡರು ಇದ್ದರು. ಕಾರ್ಯಕ್ರಮದಲ್ಲಿ ವೆಂಕಟೇಶ ಚವ್ಹಾಣ ಸ್ವಾಗತಿಸಿದರು, ಕೇದಾರನಾಥ ತುರಕಾಣಿ ನಿರೂಪಿಸಿ ವಂದಿಸಿದರು. ಇದೆ ವೇಳೆ ಕುಷ್ಟಗಿ ತಾಲೂಕಿನ ಜನರು ಅಭಿವೃದ್ದಿ ಕಾರ್ಯಗಳ ಕುರಿತು ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ