ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ವರ್ಷ ಇಲ್ಲದ ಮಸೀದಿ ಈಗ ಹೇಗೆ ಬಂತು? ಅದಕ್ಕೆ ಜಾಗ ಕೊಟ್ಟವರು ಯಾರು ಎಂಬೆಲ್ಲಾ ಮಾಹಿತಿಗಳೊಂದಿಗೆ ದಾಖಲೆಗಳನ್ನಿಟ್ಟುಕೊಂಡು ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ಹೇಳಿದರು.
೫೦೦ ಮಂದಿ ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್ ಆಗಿದೆ. ಇದರಿಂದ ಮೆರವಣಿಗೆಗೆ ಬರುವುದಕ್ಕೆ ಭಯಪಡುತ್ತಿದ್ದರು. ಯಾರು ನಮ್ಮ ರಕ್ಷಣೆಗೆ ಬರುವರೆಂದು ಪ್ರಶ್ನೆ ಮಾಡುತ್ತಿದ್ದರು. ಈಗ ಬಿಜೆಪಿಯ ಕಾನೂನು ಪ್ರಕೋಷ್ಠ ತಂಡ ಮದ್ದೂರಿಗೆ ಭೇಟಿ ಕೊಟ್ಟು ಭಯಪಟ್ಟಿದ್ದ ನಮ್ಮ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ ಎಂದರು.ಯಾವುದೇ ಹಿಂದೂ ಧರ್ಮದ ಮೇಲೆ ದಬ್ಬಾಳಿಕೆ ನಡೆದ ಸಮಯದಲ್ಲಿ ಧೈರ್ಯವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿ. ನಮ್ಮ ಧರ್ಮವನ್ನು ನಾವು ಕಾಪಾಡಿಕೊಳ್ಳಬೇಕು. ಹಿಂದೂ ಧರ್ಮ ಶಾಂತಿಯ ಸಂಕೇತ. ನಮ್ಮ ಧರ್ಮಕ್ಕೆ ಅನ್ಯಾಯ ಆದಾಗ ನಾವು ಹೋರಾಟ ಮಾಡಲೇಬೇಕು ಎಂದರು.
ಪ್ರಚೋದನಕಾರಿ ಭಾಷಣ: ಲಾಠಿ ಏಟು ತಿಂದ ಜ್ಯೋತಿ ವಿರುದ್ಧ ಎಫ್ಐಆರ್
ಗಣೇಶನ ಗಲಾಟೆಯಲ್ಲಿ ಲಾಠಿ ಏಟು ತಿಂದ ಮಹಿಳೆ ಜ್ಯೋತಿ ವಿರುದ್ಧವೂ ಮದ್ದೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರತಿಭಟನೆ ಸಮಯದಲ್ಲಿ ಅವಹೇಳನಕಾರಿ ಹಾಗು ಪ್ರಚೋನಾದನಕಾರಿಯಾಗಿ ಘೋಷಣೆ ಕೂಗಿದ್ದಕ್ಕೆ ಮದ್ದೂರು ಠಾಣೆ ಇನ್ಸ್ಪೆಕ್ಟರ್ ಎಂ.ಶಿವಕುಮಾರ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.
ಅನ್ಯಧರ್ಮಕ್ಕೆ ಧಕ್ಕೆಯಾಗುವ ಪದ ಬಳಕೆ. ಪರಸ್ಪರ ಕೋಮುಗಳ ನಡುವೆ ವೈಮನಸ್ಸು, ವೈರತ್ವ ಉತ್ತೇಜನ ನೀಡುವ ಆರೋಪದಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.. ಜ್ಯೋತಿ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಕೂಡ ಆಗಿತ್ತು.