ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಅಪಪ್ರಚಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ

KannadaprabhaNewsNetwork |  
Published : Apr 06, 2025, 01:47 AM IST
ಕ್ಯಾಪ್ಷನ5ಕೆಡಿವಿಜಿ33 ದಾವಣಗೆರೆಯಲ್ಲಿ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಧರಣಿ, ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನಸಾಮಾನ್ಯರಿಗೆ, ಬಡವರಿಗೆ ಬಹಳ ಅನುಕೂಲವಾಗಿದೆ. ಆದರೆ, ಬಿಜೆಪಿ ಈ ಯೋಜನೆಗಳ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಆರೋಪಿಸಿದರು.

ಬಿಜೆಪಿ ಧೋರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಧರಣಿ

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನಸಾಮಾನ್ಯರಿಗೆ, ಬಡವರಿಗೆ ಬಹಳ ಅನುಕೂಲವಾಗಿದೆ. ಆದರೆ, ಬಿಜೆಪಿ ಈ ಯೋಜನೆಗಳ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಆರೋಪಿಸಿದರು.

ನಗರದ ಜಯದೇವ ಸರ್ಕಲ್‌ನಲ್ಲಿ ಶನಿವಾರ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಗ್ಯಾರಂಟಿ ಯೋಜನೆ ವಿರೋಧಿಸುತ್ತಿರುವ ರಾಜ್ಯ ಬಿಜೆಪಿಯ ಧೋರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಶನಿವಾರ ಹಮ್ಮಿಕೊಂಡಿದ್ದ ಧರಣಿ, ಪ್ರತಿಭಟನೆಯಲ್ಲಿ ಮಾತನಾಡಿದರು.

ಒಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ ಬಿಜೆಪಿ, ಇನ್ನೊಂದೆಡೆ ದೇಶದ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡು ದ್ವಿಮುಖ ನಡೆ ಪ್ರದರ್ಶಿಸುತ್ತಿದೆ. ಸಮಾಜದಲ್ಲಿ ಒಂದು ಧರ್ಮವನ್ನು ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಿ ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಮೂಲಕವೇ ಬಿಜೆಪಿ ರಾಜಕಾರಣ ಮಾಡುತ್ತ ಬಂದಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಮಾತನಾಡಿ, ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕವಾಗಿದೆ. ಆದರೂ ರಾಜ್ಯದ ಪಾಲಿನ ಹಣ ನೀಡಲು ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಿದೆ. ತನ್ಮೂಲಕ ರಾಜ್ಯವನ್ನು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡುವ ಹುನ್ನಾರ ನಡೆಸಿದೆ ಎಂದರು.

ಕೇಂದ್ರ ಸರ್ಕಾರ ಹೆದ್ದಾರಿ ವಾಹನ ಸೇವಾ ಶುಲ್ಕ ಹೆಚ್ಚಿಸಿದೆ. ಔಷಧಗಳ ದರ ಹೆಚ್ಚಿಸಿದೆ. ನರೇಗಾ ಯೋಜನೆಗೆ ಅಗತ್ಯ ಅನುದಾನ ಕೊಡುತ್ತಿಲ್ಲ. ಪೆಟ್ರೋಲ್, ಡಿಸೇಲ್ ಮೇಲಿನ ಕೇಂದ್ರ ತೆರಿಗೆ ಕಡಿತಗೊಳಿಸಿ ಜನರಿಗೆ ಸಹಾಯ ಮಾಡುತ್ತಿಲ್ಲ. ಇತ್ತ ರಾಜ್ಯ ಬಿಜೆಪಿ ಇಬ್ಭಾಗವಾಗಿದ್ದು ಸಮಾಜದಲ್ಲಿ ಕೇವಲ ಗಲಾಟೆ, ಕಲಹಗಳಿಗೆ ಪ್ರಚೋದನೆ ಕೊಡುತ್ತ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿಯ ಧೋರಣೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಬಿಜೆಪಿ ವಿರುದ್ಧದ ಬರಹಗಳುಳ್ಳ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು.

ಪಕ್ಷದ ಮುಖಂಡರಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಪಾಲಿಕೆ ಮಾಜಿ ಮೇಯರ್ ಕೆ.ಚಮನ್‌ಸಾಬ್, ಪಾಲಿಕೆ ಮಾಜಿ ಸದಸ್ಯರಾದ ಎ. ನಾಗರಾಜ್, ಶಾಮನೂರು ಬಸವರಾಜ್, ಗಡಿಗುಡಾಳ್ ಮಂಜುನಾಥ್, ಎಸ್.ಮಲ್ಲಿಕಾರ್ಜುನ್, ಮೈನುದ್ದೀನ್, ಡೋಲಿ ಚಂದ್ರು, ಪುಷ್ಪಾ ಪಾಟೀಲ್, ಮಂಗಳಮ್ಮ, ದಾಕ್ಷಾಯಣಮ್ಮ, ರಾಜೇಶ್ವರಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ