ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಶಿರಸಿಯಿಂದ ಚಿತ್ರದುರ್ಗಕ್ಕೆ ಗುರುವಾರ ಆಗಮಿಸಿದ್ದ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗವನ್ನು ಹಿಡಿತದಲ್ಲಿಟ್ಟುಕೊಂಡಿರುವ ಬಿಜೆಪಿ, ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಎಸ್ಐಆರ್ ಮೂಲಕ ಲಕ್ಷಾಂತರ ಮತದಾರರ ಹೆಸರನ್ನು ಮತಪಟ್ಟಿಯಿಂದ ತೆಗೆದು ಹಾಕಿದೆ.40 ಇವಿಎಂ ಮೆಷಿನ್ಗಳನ್ನು ನಾಶಪಡಿಸಿದೆ. ನಿಜಕ್ಕೂ ಇದು ಪ್ರಜಾಪ್ರಭುತ್ವಕ್ಕೆ ಮಾರಕ. ನೈಜ ಮತದಾರರನ್ನು ಮತಪಟ್ಟಿಯಿಂದ ಡಿಲಿಟ್ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಜೆ.ಯಾದವರೆಡ್ಡಿ ಮಾತನಾಡಿ, ನುಸುಳುಕೋರರನ್ನು ಪತ್ತೆ ಹೆಚ್ಚುತ್ತೇವೆಂಬ ನೆಪದಲ್ಲಿ ಅರ್ಹ ಮತದಾರರಿಗೆ ಅನ್ಯಾಯ ಮಾಡಬಾರದು. ಎಸ್ಐಆರ್ ಮೇಲ್ನೋಟಕ್ಕೆ ಚೆನ್ನಾಗಿ ಕಾಣಬಹುದು. ಅಲ್ಪಸಂಖ್ಯಾತರು, ದಲಿತರು, ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಜಗತ್ತಿನ ಯಾವ ದೇಶದಲ್ಲಿಯೂ ಇಂತಹ ಕರಾಳತೆಯಿಲ್ಲ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ಕುಮಾರ್ ಆಯ್ಕೆ ಕೂಡ ಅಕ್ರಮ. ಬಿಹಾರ, ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಮೂಲಕ ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಡಿಲಿಟ್ ಮಾಡಿರುವ ಕಾರಣಕ್ಕಾಗಿ ಅಲ್ಲಿ ಕೋಮುವಾದಿ ಬಿಜೆಪಿ, ಅಧಿಕಾರ ಹಿಡಿದಿದೆ. ಘನಘೋರ ದುರಂತಕ್ಕೆ ಆಸ್ಪದ ಕೊಡಬಾರದು.
ರೈತ ಮುಖಂಡ ಹೊರಕೇರಪ್ಪ ಮಾತನಾಡಿ, ಕೇಂದ್ರ ಸರ್ಕಾರ ಎಸ್ಐಆರ್ ಮೂಲಕ ನಾಗರೀಕರ ಮತವನ್ನು ಕಸಿಯಲು ಹೊರಟಿದೆ. ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅನೇಕ ಕಡೆ ಚಳುವಳಿಗಳು ನಡೆಯುತ್ತಿವೆ. ಕೋಮುವಾದಿ ಬಿಜೆಪಿ ಈಗಾಗಲೆ ಅನೇಕ ರಾಜ್ಯಗಳಲ್ಲಿ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನೆಪದಲ್ಲಿ ಅಧಿಕಾರ ಹಿಡಿದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ದೇಶದ ಪ್ರತಿಯೊಬ್ಬರಿಗೂ ನೀಡಿರುವ ಮತದಾನದ ಹಕ್ಕನ್ನು ಸಂರಕ್ಷಿಸಿಕೊಳ್ಳಬೇಕಿದೆ ಎಂದರು.