ಕನ್ನಡಪ್ರಭ ವಾರ್ತೆ ಮದ್ದೂರು
ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ರೈತ ನಾಯಕಿ ಸುನಂದ ಜಯರಾಮ್ ನೇತೃತ್ವದಲ್ಲಿ ತೆರಳಿದ್ದ ಜನಪ್ರತಿನಿಧಿಗಳು ಹಾಗೂ ಮುಖಂಡರ ನಿಯೋಗದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.
ನಂತರ ಪೌರಾಡಳಿತ ಸಚಿವ ಬೈರತಿ ಸುರೇಶ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಆರ್.ಅಶೋಕ್, ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳನ್ನು ವಿಲೀನ ಮಾಡುವುದಕ್ಕೆ ಶೇ.99 ರಷ್ಟು ವಿರೋಧವಿದೆ. ಸೇರ್ಪಡೆ ಅಗತ್ಯವಿರಲಿಲ್ಲ ಎಂದು ಸಚಿವರಿಗೆ ತಿಳಿಹೇಳಿದರು.ಗ್ರಾಪಂಗಳನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವುದಕ್ಕೆ ಆರ್ಥಿಕ ತೊಂದರೆ ಇದೆ. ಆದರೆ ಕ್ಷೇತ್ರದ ಶಾಸಕರ ಒತ್ತಡಕ್ಕೆ ಮಣಿಯಬೇಕಾಯಿತು ಎಂದು ಸಚಿವ ಬೈರತಿ ಸುರೇಶ್ ವಿರೋಧ ಪಕ್ಷದ ನಾಯಕ ಅಶೋಕ್ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಬಳಿಕ ನಿಯೋಗದೊಂದಿಗೆ ಮಾತುಕತೆ ನಡೆಸಿದ ಆರ್. ಅಶೋಕ್, ಗೆಜ್ಜಲಗೆರೆ ಗ್ರಾಮಸ್ಥರು ನಡೆಸುತ್ತಿರುವ ಹೋರಾಟ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಸಿ ಪರಿಹಾರ ರೂಪಿಸುವ ಜೊತೆಗೆ ನನ್ನ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ನೀಡಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸೇರಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗುವುದು ಎಂದು ಆರ್ .ಅಶೋಕ್ ನೀಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ಸುನಂದ ಜಯರಾಮ್ ತಿಳಿಸಿದರು.